This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Sports News

ತೆನೆ ಬಾರ ಇಳಿಸಿ ಕಮಲ ಬಾರ ಹೊತ್ತುಕೊಂಡ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೆರ್ಪೇಡೆಯಾದರು ಬಸವರಾಜ ಹೊರಟ್ಟಿ…..

WhatsApp Group Join Now
Telegram Group Join Now

ಬೆಂಗಳೂರು –

ಹಿರಿಯ ರಾಜಕಾರಣಿ ಜೆಡಿಎಸ್ ಪಕ್ಷದ ಮುಖಂಡ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೆರ್ಪಡೆಯಾಗಿದ್ದಾರೆ.ಹೌದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತ್ರತ್ವದಲ್ಲಿ ಬೆಂಗಳೂರಿನಲ್ಲಿ ಕೇಸರಿ ಪಕ್ಷದ ಬಳಗವನ್ನು ಸೇರಿಕೊಂಡರು.ಪಕ್ಷದ ಧ್ವಜ ಮತ್ತು ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸ್ವಾಗತಿಸಿ ಕೊಂಡು ಬರಮಾಡಿಕೊಂಡರು.ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಸಿ.ಟಿ. ರವಿ,ಸಚಿವರಾದ ಗೋವಿಂದ ಎಂ.ಕಾರ ಜೋಳ,ಆರ್.ಅಶೋಕ್ ಸಹಿತ ಹಲವರು ಹೊರಟ್ಟಿ ಅವರನ್ನು ಅಭಿನಂದಿಸಿ ಸ್ವಾಗತಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಬಸವರಾಜ ಹೊರಟ್ಟಿ ಅವರು 45 ವರ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿ, ಮಂತ್ರಿಯಾಗಿ,ಸಭಾಪತಿಯಾಗಿ ಗೌರವ ಹೊಂದಿರುವ ಹಿರಿಯ ನಾಯಕ.ಕಾಲೇಜು, ಹೈಸ್ಕೂಲ್ ಶಿಕ್ಷಕರನ್ನು ಸಂಘಟಿಸಿ ನಿರಂತರವಾಗಿ ಹೋರಾಟ ಮಾಡಿಕೊಂಡು ರಾಜಕೀಯವಾಗಿ ತಮ್ಮದೇ ಶಕ್ತಿ ಬೆಳೆಸಿಕೊಂಡು ಬಂದಿದ್ದಾರೆ ಎಂದರು.1952 ರಿಂದ ರಾಜಕಾರಣದಲ್ಲಿ ಇದ್ದಾರೆ.ನಿರಂತರವಾಗಿ ವಿಧಾನ ಪರಿಷತ್‌ಗೆ ಆಯ್ಕೆಯಾಗುತ್ತಿರುವಂತಹ ದಾಖಲೆ ಇಡೀ ದೇಶದಲ್ಲಿಯೇ ಇಲ್ಲ.ಅಂತಹ ನಾಯಕರನ್ನು ಬರಮಾಡಿ ಕೊಳ್ಳುವುದಕ್ಕೆ ಸಂತೋಷ ಇದೆ.ಹೊರಟ್ಟಿ ಅವರು ನಮ್ಮ ಪಕ್ಷಕ್ಕೆ ಸೇರಬೇಕೆಂಬ ತೀರ್ಮಾನ ಮಾಡಿ,ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದರು. ಸಭಾಪತಿ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಎಲ್ಲವೂ ಆಂಗೀಕಾರ ಆಗಿವೆ. ಇಂದು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.ಇನ್ನೂ ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡುವ ಮೂಲಕ ಬಸವರಾಜ ಹೊರಟ್ಟಿ ಅವರನ್ನು ವಿಜೃಂಭಣೆಯಿಂದ ಬರಮಾಡಿಕೊಳ್ಳುತ್ತೇವೆ.ಅವರ ಸೇರ್ಪಡೆಯಿಂದ ಬಿಜೆಪಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ಬಂದಿದೆ. ಅವರ ಅನುಭವವನ್ನು ಗೌರವಿಸಿ ಪಕ್ಷದಲ್ಲಿ ಎಲ್ಲಾ ರೀತಿಯ ಅವಕಾಶಗಳನ್ನೂ ಮಾಡಿಕೊಡಲು ಹಿರಿಯ ನಾಯಕರು ಒಪ್ಪಿದ್ದಾರೆ. ಬಿಜೆಪಿ ಬೆಳವಣಿಗೆಗೆ ಅತ್ಯಂತ ಚರಿತ್ರಾರ್ಹ ದಿನ ಎಂದು ಬಣ್ಣಿಸಿದರು.


Google News

 

 

WhatsApp Group Join Now
Telegram Group Join Now
Suddi Sante Desk