ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಸಂಬಳ ಪ್ಯಾಕೇಜ್ ಕುರಿತು ಮಹತ್ವದ ಮಾಹಿತಿ…..

Suddi Sante Desk
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಸಂಬಳ ಪ್ಯಾಕೇಜ್ ಕುರಿತು ಮಹತ್ವದ ಮಾಹಿತಿ…..

ಬೆಂಗಳೂರು

ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ನಿಗದಿಪಡಿಸ ಲಾಗಿದ್ದ ಕೊನೆಯ ದಿನಾಂಕವನ್ನು ಸರ್ಕಾರವು ವಿಸ್ತರಿಸಿ ಆದೇಶ ಹೊರಡಿಸಿದೆ ಆಗಸ್ಟ್ 31ರವರೆಗೆ ಈ ಒಂದು ಗಡುವನ್ನು  ವಿಸ್ತರಣೆ ಮಾಡಲಾಗಿದೆ

ಸರ್ಕಾರದಿಂದ ನೇರವಾಗಿ ಅಥವಾ ಪರೋಕ್ಷವಾಗಿ ನೇಮಕ ಗೊಂಡಿರುವ ಎಲ್ಲಾ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ಗುಂಪಿನ ಅರ್ಹ ಅಧಿಕಾರಿಗಳು,ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜ್‌ನಲ್ಲಿ ನೋಂದಾಯಿಸಿಕೊಳ್ಳಲು ಈ ಮೊದಲು ಜೂನ್ 30, 2026 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿತ್ತು. ಅಷ್ಟರೊಳಗೆ ನೋಂದಾಯಿಸಿಕೊಳ್ಳದ ನೌಕರರ ಸಂಬಳ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು.

ಹಲವು ಅಧಿಕಾರಿಗಳು ಮತ್ತು ನೌಕರರು ನೋಂದಾಯಿಸಿ ಕೊಳ್ಳಲು ಇನ್ನು ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ಸರ್ಕಾರವು ನೌಕರರ ಹಿತದೃಷ್ಟಿಯಿಂದ ಈ ಅವಧಿಯನ್ನು ಇದೀಗ ಆಗಸ್ಟ್ 31, 2026 ರವರೆಗೆ ವಿಸ್ತರಿಸಿದೆ.ಈ ಕುರಿತು ಆರ್ಥಿಕ ಇಲಾಖೆಯ ಲೆಕ್ಕಾಧಿಕಾರಿಗಳಾದ ಎಸ್.ಆರ್. ನಳಿನಾ ಅವರು ಜೂನ್ 30, 2026 ರಂದು ಅಧಿಕೃತ ಪತ್ರದ ಮೂಲಕ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ-2 (HRMS-2) ರ ಯೋಜನಾ ನಿರ್ದೇಶಕರಿಗೆ ಈ ಮಾಹಿತಿ ನೀಡಿದ್ದಾರೆ. ಎಲ್ಲಾ ಅರ್ಹ ನೌಕರರು ಈ ವಿಸ್ತರಿತ ಅವಧಿಯೊಳಗೆ ತಮ್ಮ ನೋಂದಣಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.

ಅನಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.