ಬೆಂಗಳೂರು –
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾಳೆಯೂ ರಾಜ್ಯದ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಹೌದು ನಾಳೆಯೂ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ ಆದೇಶವನ್ನು ಮಾಡಿದೆ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾಗರ ತಾಲೂಕಿ ನಾದ್ಯಂತ ನಾಳೆ ಅಂದರೆ ಜುಲೈ 8, 2026ರಂದು (ಬುಧವಾರ) ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಇರಲಿದೆ ಎಂದು ತಹಶೀಲ್ದಾರ್ ಮತ್ತು ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಡಾ.ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ.
ತಹಶೀಲ್ದಾರರ ಕಚೇರಿಯಿಂದ ಹೊರಬಿದ್ದಿರುವ ಅಧಿಕೃತ ಜ್ಞಾಪನದ ಪ್ರಕಾರ, ಸಾಗರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಈ ರಜೆ ಅನ್ವಯಿಸುತ್ತದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



