This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಹತ್ತು ವರ್ಷದ ನಂತರ ಧಾರವಾಡ ದಲ್ಲಿ ಒಂದಾದ ದಂಪತಿಗಳು ದಂಪತಿಗಳನ್ನು ಒಂದು ಮಾಡಿದ ಹೈಕೋರ್ಟ್ ಕಾನೂನು ಸೇವಾ ಸಮಿತಿಯ…..

WhatsApp Group Join Now
Telegram Group Join Now

ಧಾರವಾಡ –

ಹತ್ತು ವರ್ಷಗಳ ನಂತರ ಧಾರವಾಡದಲ್ಲಿ ದಂಪತಿ ಗಳಿಬ್ಬ ರನ್ನು ಧಾರವಾಡದ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ.

ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು.ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾ ಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು.ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿ ಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು.ಉಭಯ ಪಕ್ಷಗಾರರ ಸಂಬಂಧಿಕರು ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್ ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ಮುಂದಿನ ದಾಂಪತ್ಯ ಜೀವನ ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಇಟ್ಟುಕೊಂಡು ರಾಜಿ ಮಾಡಿಕೊಂಡರು.

ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪಿ ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು ನ್ಯಾಯಾಧೀಶರುಗಳು ದಂಪತಿಗಳು ಮತ್ತೆ ಒಂದಾಗಿರುವು ದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.ದಂಪತಿಗಳು ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖ ನಾಧಿಕಾರಿ ವೆಂಕಟೇಶ ಆರ್ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk