This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಹೆಸ್ಕಾಂ ಅಧಿಕಾರಿಯ ಸಮಯ ಪ್ರಜ್ಞೆ ಯಿಂದ ಉಳಿಯಿತು ಜೀವ ವಿದ್ಯುತ್ ಟಾವರ್ ಹತ್ತಿದ್ದ ರಾಘವೇಂದ್ರ ನ ಜೀವ ಉಳಿಸಿ ಕರ್ತವ್ಯ ಪ್ರಜ್ಞೆ ಮೆರೆದರು ಹೆಸ್ಕಾಂ ಇಂಜಿನಿಯರ್ ಕಿರಣ್ ಕುಮಾರ್

WhatsApp Group Join Now
Telegram Group Join Now

ಹುಬ್ಬಳ್ಳಿ –

ಹೆಸ್ಕಾಂ ಅಧಿಕಾರಿಯೊಬ್ಬರ ಸಮಯ ಪ್ರಜ್ಞೆಯಿಂದಾಗಿ ಹೈಟೆನ್ಷನ್ ಮಾರ್ಗದ ಟಾವರ್ ಏರಿ ಆತ್ಮಹತ್ಯೆಗೆ ಯತ್ನಿ ಸಿದ್ದ ವ್ಯಕ್ತಿಯೊಬ್ಬರು ಬದುಕುಳಿದ ಘಟನೆ ಹುಬ್ಬಳ್ಳಿ ಯಲ್ಲಿ ನಡೆಸಿದೆ.ಇಲ್ಲಿನ ಬಿಡ್ನಾಳದ ೧೧ ಕೆವಿ ಹೈಟೆನ್ಷನ್ ಟಾವರ್ ಮೇಲೆ ಹತ್ತಿದ ವ್ಯಕ್ತಿಯನ್ನು ಬದುಕಿಸುವಲ್ಲಿ ಹೆಸ್ಕಾಂ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ರಾಘವೇಂದ್ರ ಬಳ್ಳಾರಿ ಎನ್ನುವ ವ್ಯಕ್ತಿ ಟಾವರ್ ಹತ್ತಿದ್ದಾನೆ. ಕೆಳಗೆ ಇಳಿಯುವಂತೆ ಕೆಲವರು ಕೂಗುತ್ತಿದ್ದರೂ ಟಾವರ್ ಏರಿದ್ದಾನೆ.ಕೂಡಲೇ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಹೆಸ್ಕಾಂ ಅಧಿಕಾರಿಯೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವ ಲೈನ್ ಎಂಬುವುದು ಖಾತರಿಯಾಗದ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಹೋಗುವ ಎಲ್ಲಾ ಮಾರ್ಗ ಗಳ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ್ದಾರೆ.

ಇದಾದ ಕೆಲವೇ ಸೆಕೆಂಡ್‌ಗಳಲ್ಲಿ ಹೈ ಟೆನ್ಷನ್ ವೈರ್ ಸ್ಪರ್ಶಿಸಿ ದ್ದಾನೆ.ಆದರೆ ವಿದ್ಯುತ್ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವ್ಯಕ್ತಿ ಬದುಕುಳಿದಿದ್ದಾನೆ.ಕೌಟುಂಬದ ಕಲಹದ ಹಿನ್ನೆಲೆ ಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ಎನ್ನಲಾಗುತ್ತಿದೆ.ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ,ಪೊಲೀಸ್ ರು ವ್ಯಕ್ತಿಯೊಬ್ಬರ ಕರೆ ಮಾಡುತ್ತಿದ್ದಂತೆ ಹೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ ಅವರು ಎಲ್ಲಾ ಮಾರ್ಗದ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ರ್‌ಗೆ ವಿಷಯ ಮುಟ್ಟಿಸಿದ್ದರು

https://youtu.be/ISzeWQVC3E8

ಘಟನೆ ಸ್ಥಳ ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿದ್ದ ಕಾರಣ ಬೆಂಡಿಗೇರಿ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.

ಅಷ್ಟೊತ್ತಿಗಾಗಲೇ ನೆರೆದಿದ್ದ ಜನರು ವ್ಯಕ್ತಿಯನ್ನು ಕೆಳಗಿ ಳಿಸಿದ್ದರು.ಸ್ಥಳಕ್ಕೆ ಆಗಮಿಸಿದ ವ್ಯಕ್ತಿಯ ಕುಟುಂಬದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ನಡೆಯಿತು.ದಾರಿಯಲ್ಲಿ ಹೋಗುತ್ತಿದ್ದವರು ಕರೆ ಮಾಡಿ ಘಟನೆ ಕುರಿತು ಮಾಹಿತಿ ನೀಡಿದರು.ಆದರೆ ಯಾವ ಮಾರ್ಗ ಎನ್ನುವುದು ಖಾತರಿಯಾಗಲಿಲ್ಲ.ಕೂಡಲೇ ಸಿಬ್ಬಂದಿ ಮೂಲಕ ಎಲ್ಲಾ ಮಾರ್ಗಗಳ ವಿದ್ಯುತ್ ಪೂರೈಕೆ ಯನ್ನು ಸ್ಥಗಿತಗೊಳಿಸಲಾಯಿತು.ವ್ಯಕ್ತಿಗೆ ಯಾವುದೇ ಗಾಯ ಅಥವಾ ಪ್ರಾಣ ಹಾನಿ ಆಗಿಲ್ಲ.ಸಕಾಲಕ್ಕೆ ಸ್ಥಳೀಯ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದರಿಂದ ನಾವು ಕೂಡಲೇ ಕಾರ್ಯಪ್ರವೃತ್ತರಾಗಲು ಸಾಧ್ಯವಾಯಿತು ಎಂದು ಗ್ರಾಮೀಣ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕಿರಣಕುಮಾರ ಹೇಳಿದರು.


Google News

 

 

WhatsApp Group Join Now
Telegram Group Join Now
Suddi Sante Desk