ಚಿಕ್ಕೋಡಿ –
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತನೊರ್ವ ಗುಂಡಿನ ದಾಳಿ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಅಪರಚಿತನೊಬ್ಬನು ಫೈರಿಂಗ್ ಮಾಡಿ ಮಾಡಿ ಪರಾರಿಯಾಗಿದ್ದಾರೆ. ಗ್ರಾಮ ಪಂಚಾಯತ ಚುನಾವಣೆಯ ಹಿನ್ನಲೆಯಲ್ಲಿ ಯಮಕನಮರಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯ ಹಿನ್ನೆಲೆಯಲ್ಲಿ ಫೈರಿಂಗ್ ನಡೆದಿರುವ ಶಂಕೆ ವ್ಯಕ್ತವಾಗಿದೆ.ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದು ಕಿರಣ ರಜಪೂತ ಹಾಗೂ ಭರಮಾ ದೂಪದಾಳೆ ಎಂಬುವರ ಮೇಲೆ ಫೈರಿಂಗ್ ಮಾಡಿದ ಅಪರಚಿತರು ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿವೆ. ಕಿರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಸ್ಕ ಹಾಕಿಕೊಂಡು 7 ಅಡಿ ಅಂತರದಿಂದ ಫೈರಿಂಗ್ ಮಾಡಿದ ಅಪರಚಿತರು ಯಾವ ವೆಪನ್ ಬಳಿಸಿ ಫೈರಿಂಗ್ ಮಾಡಿದ್ದಾರೆ ಎನ್ನುವ ತನಿಖೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಇನ್ನೂ ಸುದ್ದಿ ತಿಳಿದ ಯಮಕನಮರಡಿ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಯಮಕನಮರಡಿ ಪೊಲೀಸರು ಪೈರಿಂಗ್ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೇ ಮುಂದಾಗಿದ್ದಾರೆ.
ಇನ್ನೂ ಗಾಯಗೊಂಡಿರುವ ಕಾಂಗ್ರೇಸ್ ಕಾರ್ಯಕರ್ತರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.