ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಮುಗಳಿ ನೇಮಕ 

Suddi Sante Desk

ಧಾರವಾಡ –

ಕಳೆದ ಹಲವಾರು ವರುಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ  ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾ ಕಾಂಗ್ರೆಸ್ ಪಕ್ಷದ ಯುವ ಘಟಕದಲ್ಲಿ ಗುರುತಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಧಾರವಾಡದ ಶಂಕರ ಮುಗಳಿ‌ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಸ್ಥಾನವನ್ನು ನೀಡಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಪಕ್ಕದಲ್ಲಿ ಇದ್ದುಕೊಂಡು ಪಕ್ಷ ಮತ್ತು ನಾಯಕರು ನೀಡಿದ ಜವಾಬ್ದಾರಿಯನ್ನು ಮಾಡುತ್ತಾ ಪಕ್ಷಕ್ಕಾಗಿ ಹಗಲು ರಾತ್ರಿ ಎನ್ನದೇ ಸೇವೆ ಸಲ್ಲಿಸಿದ ಧಾರವಾಡದ ಶಂಕರ ಮುಗಳಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉನ್ನತವಾದ ಜವಾಬ್ದಾರಿಯನ್ನು ನೀಡಲಾಗಿದೆ.

ಧಾರವಾಡ ಗ್ರಾಮೀಣ  ಜಿಲ್ಲಾ  ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕಾತಿ ಮಾಡಲಾಗಿದೆ.

ಗ್ರಾಮೀಣ ಘಟಕದ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ಪಾಟೀಲ್ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

ಇದರೊಂದಿಗೆ ಶಂಕರ ಮುಗಳಿ ಅವರಿಗೆ ಪಕ್ಷದಲ್ಲಿ ಮತ್ತಷ್ಟು ಜವಾಬ್ದಾರಿಯನ್ನು ವಹಿಸಲಾಗಿದೆ ಬರುವ ಮಹಾನಗರ ಪಾಲಿಕೆ ಚುನಾವಣೆ ಗಮನವನ್ನು ಇಟ್ಟುಕೊಂಡು ಇವರಿಗೆ ನೇಮಕಾತಿ ಮಾಡಲಾಗಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಪ್ರಮುಖವಾದ ಜವಾಬ್ದಾರಿಯನ್ನು ಇವರಿಗೆ ನೀಡಲಾಗಿದೆ.

ಜಿಲ್ಲಾ ಅಧ್ಯಕ್ಷ ಅನಿಲ ಕುಮಾರ್ ಪಾಟೀಲ ನೇಮಕಾತಿ ಆದೇಶ ನೀಡಿದರು. ಒಟ್ಟಾರೆ ಯುವಕರ ಪಡೆಯನ್ನು ಬೆನ್ನಿಗೆ ಕಟ್ಟಿಕೊಂಡು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿರುವ ಶಂಕರ ಮುಗಳಿ ಅವರಿಗೆ ಒಳ್ಳೆಯದಾಗಲಿ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.