This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಸರ್ಕಾರಿ ನೌಕರನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ ನೀಡಿದ ನ್ಯಾಯಾಲಯ –ಲಂಚಕ್ಕೆ ಬೇಡಿಕೆ ಇಟ್ಟಿದ್ದ 8 ವರ್ಷದ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಲಯ

ಸರ್ಕಾರಿ ನೌಕರನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ ನೀಡಿದ ನ್ಯಾಯಾಲಯ –ಲಂಚಕ್ಕೆ ಬೇಡಿಕೆ ಇಟ್ಟಿದ್ದ 8 ವರ್ಷದ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಲಯ
WhatsApp Group Join Now
Telegram Group Join Now

ಮಂಗಳೂರು

 

ಹೌದು ಲಂಚಕ್ಕೆ ಬೇಡಿಕೆ ಇಟ್ಟಿದ್ದ 8 ವರ್ಷದ ಹಳೆಯ ಪ್ರಕರಣವೊಂದರಲ್ಲಿ ಭೂಮಾಪಕ ರೊಬ್ಬರಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆಯನ್ನು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜಮೀನು ಸರ್ವೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪುತ್ತೂರು ಶಾಖೆಯ ಭೂಮಾಪಕ ಮಹಾದೇವ ನಾಯಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು 3 ವರ್ಷ 3 ತಿಂಗಳು ಸಜೆ ಹಾಗೂ ₹ 20,000 ದಂಡ ವಿಧಿಸಿ ತೀರ್ಪು ನೀಡಿದೆ

 

ಅಪರಾಧಿಯು ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 3 ತಿಂಗಳ ಸಾದಾ ಸಜೆ ಅನು ಭವಿಸಬೇಕು ಎಂದು ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಆರ್ಯಾಪುವಿನಲ್ಲಿ ತಮ್ಮ ತಂದೆ ಕೃಷ್ಣಪ್ಪ ಅವರ ಜಮೀನಿನ ಅಳತೆ ಮಾಡಿ ಸಲು ಮಹಾದೇವ ನಾಯಕ್‌ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಂಕಿತಾ ಎಂಬವರು 2014ರ ಮಾ.15ರಂದು ನಗರದ ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

 

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ ಎಸ್.ವಿಜಯ ಪ್ರಸಾದ್‌ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪ್ಪಾಡಿ ಅವರು ಸರ್ಕಾರದ ಪರವಾಗಿ ವಾದಿ ಸಿದ್ದರು ದಕ್ಷಿಣ ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ 2021-22ನೇ ಸಾಲಿನಲ್ಲಿ ಒಟ್ಟು ಎಂಟು ಹಾಗೂ 2022ನೇ ಸಾಲಿನಲ್ಲಿ ನಾಲ್ಕು ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಅಪರಾಧಿ ಗಳಿಗೆ ಶಿಕ್ಷೆ ಆಗಿದ್ದು 8 ವರ್ಷಗಳ ಪ್ರಕರಣವೊಂದ ರಲ್ಲಿ ಸರ್ಕಾರಿ ನೌಕರರೊಬ್ಬರಿಗೆ ನ್ಯಾಯಾಲಯ ಶಿಕ್ಷೆಯನ್ನು ನೀಡಿ ಬುದ್ದಿಯನ್ನು ಕಲಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk