This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ದೀಪಾವಳಿ ಮುನ್ನವೇ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ CM ರಾಜ್ಯದ ಸರ್ಕಾರಿ ನೌಕರರ ಪರವಾಗಿ ಭೇಟಿಯಾದ ಷಡಾಕ್ಷರಿ ಅವರ ಸಮ್ಮುಖದಲ್ಲಿಯೇ ವೇತನ ಆಯೋಗಕ್ಕೆ ಸಮಿತಿ ರಚನೆಗೆ ಸೂಚನೆ

WhatsApp Group Join Now
Telegram Group Join Now

ಬೆಂಗಳೂರು

 

ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆ ಈಡೇರಿಕೆಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಗಾಗಿ ವೇತನ ಸಮಿತಿ, ಆಯೋಗ ರಚಿಸೋದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ,ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಯಿತು

 

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ‘ಕೃಷ್ಣ’ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ನೌಕರರ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ನೀಡಲಾಯಿತು.

 

ಈ ಚರ್ಚೆ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಇದೇ ತಿಂಗಳಲ್ಲಿ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ,ಆಯೋಗ ರಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

 

ಇನ್ನೂ ವೇತನ ಸಮಿತಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ವೇತನ ಭತ್ಯೆಗಳ ಜೊತೆ ನೌಕರರಿಗೆ ಇನ್ಸೆಂಟೀವ್ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಹೊಂದಲಾಗಿದ್ದು ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ದೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

 

ಎನ್.ಪಿ.ಎಸ್. ರದ್ದುಪಡಿಸುವ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಸಂಬಂಧ ಅನ್ಯ ರಾಜ್ಯಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ.

 

ಇದಕ್ಕಾಗಿ ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ.


Google News

 

 

WhatsApp Group Join Now
Telegram Group Join Now
Suddi Sante Desk