ಸಾಲಬಾಧೆ ರೈತ ಆತ್ಮಹತ್ಯೆ – ವಿಷ ಸೇವನೆ ಮಾಡಿ ಆತ್ಮಹತ್ಯೆ ಶರಣಾದ ರೈತ

Suddi Sante Desk

ಕುಂದಗೋಳ –

ಸಾಲಬಾಧೆ ತಾಳಲಾರದೇ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕನರ್ತಿ ಗ್ರಾಮದ ಬಸವಣ್ಣಪ್ಪ ದೊಳ್ಳನವರ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾರೆ.

ಯರಗಪ್ಪಿ ಬ್ಯಾಂಕ್ ನಲ್ಲಿ 1 ಲಕ್ಷ ರೂಪಾಯಿ ಹಾಗೂ ಕೈಗಡ ರೂಪದಲ್ಲಿ 3 ಲಕ್ಷ ರೂಪಾಯಿ ಸಾಲ ಮಾಡಿದ್ದನಂತೆ. ತಡರಾತ್ರಿ ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ವಿಷಯ ತಿಳಿದ ಕುಂದಗೋಳ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.