ಕೊಲೆ ಮಾಡಿ ಚರಂಡಿಯಲ್ಲಿ ಹೊಗೆದು ಪರಾರಿ – ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ

Suddi Sante Desk

ಹುಬ್ಬಳ್ಳಿ

ಯುವಕನೊಬ್ಬನನ್ನು ಕೊಲೆ ಮಾಡಿ ಚರಂಡಿಯಲ್ಲಿ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ದೇವಾಂಗಪೇಠೆಯಲ್ಲಿ ಈ ಒಂದು ಘಟನೆ ನಡೆದಿದೆ. ಮಾಬುಸಾಬ್ ಅಲ್ಲಾಭಕ್ಷ ಶಿವಳ್ಳಿ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು ಚರಂಡಿಯಲ್ಲಿ ಹಾಕಿ ಪರಾರಿಯಾಗಿದ್ದಾರೆ.

ದೇವಾಂಗಪೇಟೆಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಈ ಒಂದು ಶವ ಪತ್ತೆಯಾಗಿದೆ.

ಸಧ್ಯ ವಿಷಯ ತಿಳಿದ ಅಶೋಕ ನಗರದ ಇನಸ್ಪೇಕ್ಟರ್ ರವಿಚಂದ್ರ ಬಡಫಕೀರಪ್ಪನವರ ಮತ್ತು ಅಶೋಕನಗರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡತಾ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.