This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಬೆಂಗಳೂರು ನಗರ

ಲಂಚ ಪಡೆದಿದ್ದ PDO ಗೆ ಜೈಲು ಜೈಲು ಶಿಕ್ಷೆ ನೀಡಿದ ನ್ಯಾಯಾಲಯ – 6 ವರ್ಷದ ಬಳಿಕ 5 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಮಾಡಿದ ನ್ಯಾಯಾಲಯ

WhatsApp Group Join Now
Telegram Group Join Now

ಬೆಂಗಳೂರು –

ಹೌದು ಇಂತಹದೊಂದು ಪ್ರಕರಣವೊಂದು ಬೆಂಗಳೂರಿನಲ್ಲಿ ಕಂಡು ಬಂದಿದೆ.ಕೈ ತುಂಬಾ ಸರ್ಕಾರಿ ಸಂಬಳವಿದ್ದರೂ ಕೂಡಾ ನಿವೇಶನ ಮಾಲೀಕರೊಬ್ಬರಿಗೆ ನಕ್ಷೆ ಖಾತೆ ಮಾಡಿಕೊಡಲು 1 ಲಕ್ಷ ರೂಪಾಯಿ ಲಂಚವನ್ನು ಪಡೆದಿದ್ದ ಪ್ರಕರ ಣದಲ್ಲಿ ಆನೇಕಲ್‌ ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿಯ ಹಿಂದಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಡಿ ರಾಮಕೃಷ್ಣಪ್ಪ ಅಪರಾಧಿ ಎಂದು ತೀರ್ಮಾನಿಸಿದ ನ್ಯಾಯಾ ಲಯ 5 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪನ್ನು ನೀಡಿದೆ.

ಗ್ರಾಮಾಂತರ ಜಿಲ್ಲಾ ಒಂಬತ್ತನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 50,000 ದಂಡ ವಿಧಿಸಿ ಆದೇಶವನ್ನು ಮಾಡಿದೆ.ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂಡಸಂದ್ರ ಗ್ರಾಮ ದಲ್ಲಿನ ಎರಡು ನಿವೇಶನಗಳಲ್ಲಿ ಕಟ್ಟಡ ನಿರ್ಮಿಸಿದ್ದ ಪಿ.ವಿ. ನಿರ್ಮಲ್‌ ಎಂಬುವವರು 11-ಈ ನಕ್ಷೆ ನೀಡುವಂತೆ ಕೋರಿ 2014ರಲ್ಲಿ ಗ್ರಾಮ ಅರ್ಜಿ ಸಲ್ಲಿಸಿದ್ದರು.

₹ 1.10 ಲಕ್ಷ ಲಂಚ ನೀಡುವಂತೆ ರಾಮಕೃಷ್ಣಪ್ಪ ಬೇಡಿಕೆ ಇಟ್ಟಿದ್ದರು.ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವಿಭಾಗಕ್ಕೆ ದೂರನ್ನು ನೀಡಿದ್ದರು ನಿರ್ಮಲ್‌ ಅವರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ರಾಮಕೃಷ್ಣಪ್ಪ ಅವರನ್ನು 2014ರ ಡಿಸೆಂಬರ್‌ 1ರಂದು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ಲೋಕಾಯುಕ್ತದ ಆಗಿನ ಪೊಲೀಸ್‌ ಇನ್‌ಸ್ಪೆಕ್ಟರ್‌ ಕೆ.ವಿ. ಕೃಷ್ಣಪ್ಪ, ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣ ಗೊಳಿಸಿದ ನ್ಯಾಯಾಧೀಶ ಶ್ರೀಧರ್‌ ಎಸ್‌ ಅವರು ಈ ಒಂದು ಕುರಿತಂತೆ ಆದೇಶವನ್ನು ಮಾಡಿ ತೀರ್ಪನ್ನು ನೀಡಿದ್ದಾರೆ.ಇನ್ನೂ ಈ ಒಂದು ಪ್ರಕರಣದಲ್ಲಿ ರಾಮಕೃಷ್ಣಪ್ಪ ದೋಷಿ ಎಂದು ತೀರ್ಮಾನಿಸಿದ ನ್ಯಾಯಾಲಯ ಅಪರಾಧಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 50,000 ದಂಡ ವಿಧಿಸಿತು.

ದಂಡ ಪಾವತಿಗೆ ತಪ್ಪಿದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸುವಂ ತೆಯೂ ಸೂಚಿಸಿತು.ಲೋಕಾಯುಕ್ತದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ ಕೆ. ಮಹಾಲಕ್ಷ್ಮಿ ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಪರ ವಾದ ಮಂಡಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk