ಯೊಗೀಶಗೌಡ ಹತ್ಯೆ ಪ್ರಕರಣ – ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Suddi Sante Desk

ಧಾರವಾಡ –

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.ಜ. 22ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಇಂದು ವಿಚಾರಣೆ ಮಾಡಿ ಮತ್ತೆ 14 ದಿನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಯಿತು.

.

ಕಳೆದ ಎರಡು ತಿಂಗಳಿನಿಂದ ಹಿಂಡಲಗಾ ಜೈಲಿನಲ್ಲಿ ವಿನಯ ಕುಲಕರ್ಣಿ ಇದ್ದರೆ ಇತ್ತ ಧಾರವಾಡದ ಕಾರಾಗೃಹದಲ್ಲಿ ಚಂದ್ರಶೇಖರ ಇಂಡಿ ವಿನಯ ಕುಲಕರ್ಣಿ ಸೋದರ ಮಾವ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.