This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ಮಾರ್ಚ್ ನಲ್ಲಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಜಾರಿಗೆ ಮಾಡುತ್ತೇನೆ CM ಹೇಳಿಕೆ – ರಾಜ್ಯದಲ್ಲಿ ಜೋರಾಗುತ್ತಿದೆ ಹೋರಾಟದ ಕಾವು

ಮಾರ್ಚ್ ನಲ್ಲಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಜಾರಿಗೆ ಮಾಡುತ್ತೇನೆ CM ಹೇಳಿಕೆ –  ರಾಜ್ಯದಲ್ಲಿ ಜೋರಾಗುತ್ತಿದೆ ಹೋರಾಟದ ಕಾವು
WhatsApp Group Join Now
Telegram Group Join Now

ಬೆಂಗಳೂರು

7ನೇ ವೇತನ ಆಯೋಗ ಜಾರಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸೇರಿದಂತೆ ಕೆಲವೊಂ ದಿಷ್ಟು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಂದು ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಕರೆ ನೀಡಿರುವ ಹೋರಾಟಕ್ಕೆ ರಾಜ್ಯ ದಲ್ಲಿ ಒಂದು ಕಡೆ ಕಾವು ಜೋರಾಗುತ್ತಿದೆ.ಇನ್ನೂ ಈ ಒಂದು ವಿಚಾರ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಮಾತ ನಾಡಿ ಮಾರ್ಚ್ ತಿಂಗಳು 7ನೇ ವೇತನ ಆಯೋಗದ ಸಮಿತಿಯಿಂದ ಮಧ್ಯಂತರ ವರದಿಯನ್ನು ಪಡೆದು 7ನೇ ವೇತನ ಆಯೋಗ ಜಾರಿಗೆ ಕುರಿತಂತೆ ಶಿಫಾರಸು ಮಾಡುತ್ತೇನೆ ಎಂದಿದ್ದಾರೆ.

ಜಾರಿ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ಹೇಳಿದ್ದು ಈ ಒಂದು ಮಾತುಗಳಿಂದ ರಾಜ್ಯದ ಸರ್ಕಾರಿ ನೌಕರರು ಸಮಾಧಾನವಾಗದೇ ಮತ್ತಷ್ಟು ಆಕ್ರೋಶ ಗೊಂಡಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ.ವೇತನ ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊ ಳ್ಳುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ಯ ಮಾತುಗಳನ್ನು ಹೇಳಿದ್ದಾರೆ.

ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದೇನೆ ಮಾರ್ಚ್ ಒಳಗೆ ಮಧ್ಯಂತರ ವರದಿ ಕೊಡಲು ಸೂಚಿಸುತ್ತೇನೆ.ಮಧ್ಯಂತರ ವರದಿ ಬಂದ ಬಳಿಕ ಮಾರ್ಚ್ ಒಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮಧ್ಯಂತರ ವರದಿಯ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದ್ದು ಅದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ ಆದರೆ ಈ ಒಂದು ಮಾತುಗಳು ರಾಜ್ಯದ ಸರ್ಕಾರಿ ನೌಕರರಿಗೆ ತೃಪ್ತಿಯನ್ನು ತಂದಿಲ್ಲ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಗಾಗಿ 7ನೇ ವೇತನ ಆಯೋಗ ಈಗಾಗಲೇ ರಚನೆ ಮಾಡಲಾಗಿದೆ.ವೇತನ ಆಯೋಗದಿಂದ ಮಾರ್ಚ್ ಒಳಗೆ ಮಧ್ಯಂತರ ವರದಿ ಪಡೆದು ವರದಿಯ ಶಿಫಾರಸು ಜಾರಿಗೆ ಕ್ರಮಕೈ ಗೊಳ್ಳಲಾ ಗುವುದು ಎಂದು ಹೇಳಿದ್ದಾರೆ.

 

 

ಇನ್ನೂ ಕುರಿತಂತೆ ಸ್ಪಷ್ಟವಾಗಿ ಮುಖ್ಯಮಂತ್ರಿಯ ವರು ಮಾತುಗಳು ಭರವಸೆಯಷ್ಟೇಯಾಗಿದ್ದು ಇದನ್ನು ರಾಜ್ಯದ ನೌಕರರು ತಿರಸ್ಕರಿಸಿದ್ದಾರೆ ಈಗಾಗಲೇ ರಾಜ್ಯದ ಸರ್ಕಾರಿ ನೌಕರರ ಸಂಘ ಹೋರಾಟಕ್ಕೆ ಕರೆ ನೀಡಿದ್ದು ಈ ಒಂದು ವಿಚಾರ ಕುರಿತಂತೆ ಮುಖ್ಯಮಂತ್ರಿ ಯವರು ಸಂಘಟನೆ ಯ ನಾಯಕರಿಗೆ ಯಾವುದೇ ರೀತಿಯಲ್ಲೂ ಸ್ಪಷ್ಟವಾದ ಸಂದೇಶವನ್ನು ನೀಡಲಿಲ್ಲ.ಹೀಗಾಗಿ ಇವರ ಮಾತುಗಳು ಗೊಂದಲವಾಗಿದ್ದು ಕಂಡು ಬಂದಿದ್ದು ಇತ್ತ ನೌಕರರು ರಾಜ್ಯದಲ್ಲಿ ಹೋರಾ ಟಕ್ಕೆ ಸಿದ್ದರಾಗುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

 


Google News

 

 

WhatsApp Group Join Now
Telegram Group Join Now
Suddi Sante Desk