This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

Local News

ಭೂಗತ ಪಾತಕಿ ಬಚ್ಚಾಖಾನ್ ವಿಚಾರಣೆ – ಧಾರವಾಡದ ಉಪನಗರ ಪೊಲೀಸರಿಂದ ಬಿಡುವಿಲ್ಲದ ತನಿಖೆ

WhatsApp Group Join Now
Telegram Group Join Now

ಧಾರವಾಡ –

ಭೂಗತ ಪಾತಕಿ ಬಚ್ಚಾಖಾನ್ ನನ್ನು ವಶಕ್ಕೆ ತಗೆದುಕೊಂಡಿರುವ ಧಾರವಾಡ ಉಪನಗರ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ. ಈಗಾಗಲೇ ಬಚ್ಚಾಖಾನ್ ನನ್ನು ಧಾರವಾಡ ಉಪನಗರ ಪೊಲೀಸ್ ವಶಕ್ಕೆ ತಗೆದಕೊಂಡು ನಿನ್ನೇಯಷ್ಚೇ ನ್ಯಾಯಾಲಯಕ್ಕೆ ಹಾಜರು ಮಾಡಿ ನಾಲ್ಕು ದಿನಗಳ ಕಾಲ ವಶಕ್ಕೆ ತಗೆದುಕೊಂಡಿದ್ದಾರೆ.

ಮೈಸೂರು ಜೈಲಿನಲ್ಲಿದ್ದುಕೊಂಡೇ ಧಾರವಾಡದ ಅನೇಕರಿಗೆ ತನ್ನ ಬಂಟರ ಮೂಲಕ ಧಮ್ಕಿ ಹಾಕಿಸಿ ಹಫ್ತಾ ವಸೂಲಿಗಿಳಿದಿದ್ದನಂತೆ. ಈ ಕುರಿತಂತೆ ಧಾರವಾಡದ ರೆಹಮಾನ್ ಎಂಬುವರು ಉಪನಗರ ಪೊಲೀಸರಿಗೆ ದೂರನ್ನು ನೀಡಿದ್ದರು. ದೂರು ದಾಖಲು ಮಾಡಿಕೊಂಡಿದ್ದ ಉಪನಗರ ಇನಸ್ಪೇಕ್ಟರ್ ಪ್ರಮೋದ ಯಲಿಗಾರ ಮತ್ತು ಇತರೆ ಸಿಬ್ಬಂದಿಗಳು ಅನುಮತಿ ತಗೆದುಕೊಂಡು ಮೈಸೂರು ಕಾರಾಗೃಹದಿಂದ ವಶಕ್ಕೆ ತಗೆದುಕೊಂಡು ಬಂದಿದ್ದಾರೆ.

ಬಚ್ಚಖಾನ್ ಫ್ರೂಟ್ ಇರ್ಫಾನ್ ಸಾವಿನ ಬಳಿಕ ಹುಬ್ಬಳ್ಳಿ-ಧಾರವಾಡ ಮೇಲೆ ಹಿಡಿತ ಸಾಧಿಸಲು ಮುಂದಾಗಿದ್ದರಂತೆ.ಅಲ್ಲದೇ ಉಪನಗರ ಠಾಣೆ ವ್ಯಾಪ್ತಿಯಲ್ಲಿನ ಅನೇಕ ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದಂತೆ. ಪೆಟ್ರೋಲ್ ಬಂಕ್ ಮಾಲೀಕರು ಸೇರಿ ಅನೇಕರಿಗೆ ಬಚ್ಚಾಖಾನ್ ಬಂಟರಿಂದ ಧಮ್ಕಿ ಹಾಕಿದ್ದು ಈ ಒಂದು ಹಿನ್ನೆಲೆಯಲ್ಲಿ ಬಚ್ಚಾಖಾನ್ ನನ್ನು ಉಪನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೇ ನ್ಯಾಯಾಲಯಕ್ಕೇ ಹಾಜರು ಮಾಡಿದ್ದು ಸಧ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶದಲ್ಲಿದ್ದು ತನಿಖೆ ಮಾಡಲಾಗುತ್ತಿದೆ. ಜೈಲಿನಲ್ಲಿದ್ದುಕೊಂಡು ಹೇಗೆ ಬೆದರಿಕೆ ಹಾಕಲಾಗಿದೆ ಯಾರಿಂದ ಯಾರು ಹಾಕಿದ್ದಾರೆ ಇವೆಲ್ಲ ವಿಚಾರ ಕುರಿತಂತೆ ಇನಸ್ಪೇಕ್ಟರ್ ಪ್ರಮೋದ ಯಲಿಗಾರ,ಪಿಎಸೈ ಶ್ರೀಮಂತ ಹುಣಸಿಕಟ್ಟಿ ಸೇರಿದಂತೆ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ತನಿಖೆಯನ್ನು ಮಾಡ್ತಾ ಇದ್ದಾರೆ.ಬಿಡುವಲ್ಲದೇ ತನಿಖೆಯನ್ನು ಮಾಡುತ್ತಿದ್ದು ವಿಚಾರಣೆ ಸಮಯದಲ್ಲಿ ಕೆಲ ಮಹತ್ವದ ಮಾಹಿತಿಗಳು ದಾಖಲೆಗಳು ಪೊಲೀಸರಿಗೆ ಸಿಕ್ಕಿದ್ದು ಇನ್ನೂ ಕೂಡಾ ತನಿಖೆ ಮಾಡಲಾಗುತ್ತಿದೆ.

ಇದರೊಂದಿಗೆ ಇವನ ಇನ್ನೂ ಮೂವರು ಬಂಟರನ್ನು ಕೂಡಾ ಬಂಧಿಸಲಾಗಿದ್ದು ಅವರನ್ನು ಉಪನಗರ ಠಾಣೆ ಪೊಲೀಸರು ಬಚ್ಚಾಖಾನ್‌ ನೊಂದಿಗೆ ವಿಚಾರಣೆಯನ್ನು ಮಾಡುತ್ತಿದ್ದಾರೆ.ಕೆಲವು ಮಹತ್ವದ ವಿಚಾರಗಳು ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ಸಿಕ್ಕಿದ್ದು ಬಿಡುವಿಲ್ಲದೇ ತನಿಖೆ ನಡೆಯುತ್ತಿದೆ.

ಇನ್ನೂ ಉಪನಗರ ಪೊಲೀಸರಿಗೆ ಧಾರವಾಡ ಶಹರ ಪೊಲೀಸ್ ಠಾಣೆಯ ಇನಸ್ಪೇಕ್ಟರ್ ಶ್ರೀಧರ ಸತಾರೆ,ವಿದ್ಯಾಗಿರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಹಾಂತೇಶ ಬಸಾಪೂರ, ಸಂಚಾರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಲಗೌಡ ನಾಯ್ಕರ್, ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk