This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಭ್ರಷ್ಟ ಸರ್ಕಾರಿ ಅಧಿಕಾರಿಗಳು – ಕೈ ತುಂಬಾ ಸಂಬಳವಿದ್ದರೂ ಮತ್ತೆ ಲಂಚಕ್ಕಾಗಿ ಕೈ ಹಾಕಿ ಲಾಕ್ ಆಗಿ ಜೈಲು ಸೇರಿದ ಇಬ್ಬರು ಅಧಿಕಾರಿಗಳು

WhatsApp Group Join Now
Telegram Group Join Now

ಬೆಂಗಳೂರು

ಹೌದು ರಾಜ್ಯದಲ್ಲಿ ಮತ್ತೆ ಇಬ್ಬರು ಭ್ರಷ್ಟ ಸರ್ಕಾರಿ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕಾಮಗಾರಿ ವಿಚಾರ ಕುರಿತಂತೆ ಅಧಿಕಾರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆಯ ಡಿಸಿಎಫಅ ರೊಬ್ಬರು ಟ್ಯ್ರಾಪ್ ಆಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಕೆಳ ಹಂತದ ಅಧಿಕಾರಿಯೊಬ್ಬರಿಂದ ₹ 50 ಸಾವಿರ ಲಂಚ ಪಡೆಯುತ್ತಿದ್ದ ಆರೋಪ ಮೇರೆಗೆ ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್‌ ಪೂರ್ಣಿಮಾ ಅವರೇ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ.ಇಲಾಖೆಯಿಂದ ₹ 1.60 ಲಕ್ಷ ವೆಚ್ಚದಲ್ಲಿ 2 ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು

ಇದರಲ್ಲಿ ಶೇ 60ರಷ್ಟು ಹಣವನ್ನು ತನಗೆ ನೀಡ ಬೇಕು ಎಂದು ಆರೋಪಿ ಪೂರ್ಣಿಮಾ ತನ್ನ ಅಧೀನ ಅಧಿಕಾರಿಯನ್ನು ಪೀಡಿಸುತ್ತಿದ್ದರು ಈ ಕಾಮಗಾರಿಯನ್ನು ಲಂಚ ಪಡೆಯದೇ ಕೈಗೊಂಡಿ ರುವುದಾಗಿ ಹೇಳಿದರೂ ₹ 1 ಲಕ್ಷ ಹಣ ನೀಡ ಬೇಕು ಇಲ್ಲದೇ ಇದ್ದರೆ ಅಮಾನತುಪಡಿಸಲಾಗು ವುದು ಎಂದು ಬೆದರಿಕೆಯನ್ನೂ ಅವರು ತನ್ನ ಅಧೀನ ಅಧಿಕಾರಿಗೆ ಒಡ್ಡಿದ್ದರು.

ಇದರ ಮುಂಗಡ ಹಣವಾಗಿ ₹ 50 ಸಾವಿರ ಹಣವನ್ನು ಅರಣ್ಯ ಭವನದ ಮುಂಭಾಗ ಇರುವ ತನ್ನ ಜೀಪಿನಲ್ಲಿ ಹಾಕುವಂತೆ ಪೂರ್ಣಿಮಾ ಸೂಚಿ ಸಿದ್ದರು ಅದರಂತೆ ಅಧೀನ ಅಧಿಕಾರಿಯು ಜೀಪ್ ನಲ್ಲಿ ಲಂಚದ ಹಣ ಹಾಕುತ್ತಿದ್ದಂತೆ ಪೂರ್ಣಿಮಾ ಅವರನ್ನು ಬಂಧಿಸಲಾಯಿತು ಎಂದು ಲೋಕಾ ಯುಕ್ತ ಪೊಲೀಸರು ತಿಳಿಸಿದ್ದಾರೆ.

ಹೊದ್ದೂರು ವೋಟೆಕಾಡು ನರ್ಸರಿಯಲ್ಲಿ ವಾಚರ್‌ ಒಬ್ಬರನ್ನು ನೇಮಿಸಿಕೊಂಡಂತೆ ದಾಖಲಾತಿ ಸೃಷ್ಟಿಸಿ ವಾಚರ್‌ಗೆ ನೀಡಲಾಗುವ ಮಾಸಿಕ ₹ 15 ಸಾವಿರ ವೇತನವನ್ನು ತನಗೆ ನೀಡುವಂತೆಯೂ ಪೂರ್ಣಿಮಾ ತನ್ನ ಅಧೀನ ಅಧಿಕಾರಿಗೆ ಹೇಳಿದ್ದರು ಇದಕ್ಕೆ ಒಪ್ಪದಿದ್ದಾಗ ಸಾರ್ವಜನಿಕವಾಗಿ ತನ್ನನ್ನು ನಿಂದಿಸುತ್ತಿದ್ದರು ಎಂದು ಅಧೀನ ಅಧಿಕಾರಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೈಸೂರು ವಿಭಾಗದ ಲೋಕಾಯುಕ್ತ ಎಸ್‌.ಪಿ ಸುರೇಶ್‌ಬಾಬು ಅವರ ಮಾರ್ಗದರ್ಶನದಲ್ಲಿ, ಮೈಸೂರಿನ ಡಿವೈಎಸ್‌ಪಿ ಕೃಷ್ಣಯ್ಯ ಮಡಿಕೇ ರಿಯ ಡಿವೈಎಸ್‌ಪಿ ಪವನ್‌ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಇನ್ಸ್ಪೆಕ್ಟರ್ ಗಳಾದ ಲೋಕೇಶ್, ಜಯರತ್ನಾ, ಸಿಬ್ಬಂದಿಯಾದ ಲೋಕೇಶ್, ಮಂಜುನಾಥ, ಸಲಾಹುದ್ದೀನ್, ದೀಪಿಕಾ, ಅರುಣ್‌ಕುಮಾರ್, ಶಶಿ, ತ್ರಿವೇಣಿ, ಪ್ರಕಾಶ್, ಲೋಕೇಶ್ ಕಾರ್ಯಾಚರಣೆ ತಂಡದಲ್ಲಿ ದ್ದರು.

ಇನ್ನೂ ಇತ್ತ ಮತ್ತೊಂದು ಪ್ರಕರಣದಲ್ಲಿ ಮತ್ತೊರ್ವ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಶಿವರಾಜ್ ಎನ್. ಎಲಿಗಾರ್ ಲೋಕಾ ಯುಕ್ತ ಬಲೆಗೆ ಬಿದ್ದಿದ್ದಾರೆ.ಪಟ್ಟಣದ ನಿವಾಸಿ ರಾಜು ಎಂಬುವರ ದೂರಿನ ಮೇರೆಗೆ ಲೋಕಾ ಯುಕ್ತ ಅಧಿಕಾರಿಗಳು ದಾಳಿ ನಡೆಸಿ ₹34 ಸಾವಿರ ಲಂಚ ಪಡೆಯುವಾಗ ಶಿವರಾಜ್ ಎನ್.
ಎಲಿಗಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ

ರಾಜು ಇಲಾಖೆಗೆ ಬಿಟ್ಟಿದ್ದ ಕಾರಿನ ತಿಂಗಳ ಬಾಡಿಗೆ ಬಿಲ್ ಪಾವತಿಸಬೇಕಿತ್ತು ಬಿಲ್ ಮಾಡಿಕೊಡಲು ₹34 ಸಾವಿರ ಲಂಚಕ್ಕೆ ಒತ್ತಾಯಿಸಿದ್ದರು.
ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜು ನಾಥ್, ಹರೀಶ್, ಇನ್ಸ್‌ಪೆಕ್ಟರ್ ರಾಮರೆಡ್ಡಿ, ಸಲೀಮ್ ನೇತೃತ್ವದ ತಂಡ ದಾಳಿ ನಡೆಸಿತ್ತು.ಸಧ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ತಗೆದುಕೊಂಡಿ ರುವ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk