This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಸರ್ಕಾರದ ರಚನೆ ಬೆನ್ನಲ್ಲೇ ‌ನೌಕರರ ಬೇಡಿಕೆಗಳನ್ನಿಟ್ಟ ಸಂಘಟನೆ – ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಪತ್ರ ಬರೆದು ಒತ್ತಾಯಿಸಿದ್ದೇನು ನೋಡಿ…..

WhatsApp Group Join Now
Telegram Group Join Now

ಧಾರವಾಡ

ಹೌದು ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಬೆನ್ನಲ್ಲೇ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಗಳ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿದೆ ಕೆಲ ಬೇಡಿಕೆ ಗಳ ಕುರಿತು ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರು ಬೇಡಿಕೆ ಗಳ ಕುರಿತು ಪತ್ರ ವನ್ನು ಬರೆದಿದ್ದಾರೆ.

ಶೇ.4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿ ಎಂದು ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರವನ್ನು ಬರೆದಿದೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-01-2023ರಿಂದ ಬಾಕಿ ಇರುವ ತುಟ್ಟಿಭತ್ಯೆ ಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡು ವಂತೆ ನೌಕರರ ಸಂಘವು ಮುಖ್ಯಮಂತ್ರಿಗೆ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು ದಿನಾಂಕ 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರಿ ನೌಕರರಿಗೆ ಮಾಡಲಾಗಿತ್ತು.

ರಾಜ್ಯ ಸರ್ಕಾರಿ ನೌಕರರಿಗೂ ಶೇ.4ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಲು ಸಂಘವು ಮನವಿ ಮಾಡಿತ್ತು ಆ ಕಡತವನ್ನು ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಪ್ರಯುಕ್ತ ಬಾಕಿ ಇಡಲಾಗಿತ್ತು

ಪ್ರಸ್ತುತ ನೀತಿ ಸಂಹಿತೆಯು ಅಂತ್ಯಗೊಂಡಿರುವು ದರಿಂದ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-01-2023ರಿಂದ ಅನ್ವಯವಾಗುವಂತೆ ಶೇ.4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk