ಹುಬ್ಬಳ್ಳಿ ಚನ್ನಮ್ಮ ವೃತ್ತಕ್ಕೆ ಪ್ಲೈ ಓವರ್ ಯೋಜನೆಗೆ ಭಾಗ್ಯ – ಚನ್ನಮ್ಮ ವೃತ್ತದಲ್ಲಿ ರಾರಾಜಿಸುತ್ತಿರುವ ಬಿಜೆಪಿ ನಾಯಕರ ಬ್ಯಾನರ್ ಬಂಟಿಂಗ್ಸ್ ಗಳು

Suddi Sante Desk

ಹುಬ್ಬಳ್ಳಿ –

ಬಹುದಿನಗಳ ಬೇಡಿಕೆಯ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಕೊನೆಗೂ ಪ್ಲೈ ಓವರ್ ಕಾಮಗಾರಿಗೆ ನಾಳೆ ಶಂಕುಸ್ಥಾಪನೆ ನಡೆಯಲಿದೆ.ಇದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇತರೆ ನಾಯಕರ ಪ್ರಯತ್ನದಿಂದ ಈ ಒಂದು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ‌.

ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಈ ಒಂದು ಯೋಜನೆ ಮಾಡಲಾಗಿತ್ತಿದೆ.ಇನ್ನೂ ನಾಳೆಯ ಪೂಜೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ನಾಯಕರ ಬ್ಯಾನರ್ ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ.

ಇನ್ನೂ ನಗರದಲ್ಲಿ ಯಾರು ಅನುಮತಿ ಇಲ್ಲದೇ ಬ್ಯಾನರ್ ಹಾಕುವಂತಿಲ್ಲ ಎಂದು ಈ ಹಿಂದೆ ಪಾಲಿಕೆಯ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು ಈಗ ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ಹಾಕಲಾಗಿದ್ದು ಪಾಲಿಕೆಯ ಅಧಿಕಾರಿಗಳಿಗೆ ಇವುಗಳು ಕಾಣುತ್ತಿಲ್ಲವೇ.ಇನ್ನೂ ಇವೆಲ್ಲದರ ನಡುವೆ ಈ ಒಂದು ಯೋಜನೆಯಿಂದ ಚನ್ನಮ್ಮ ಪ್ರತಿಮೆಗೆ ಅವಮಾನ ಮಾಡಿದಂತಾಗುತ್ತಿದ್ದು ಕೂಡಲೇ ಇದನ್ನು ಕೈಬಿಡುವಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಒತ್ತಾಯ ಮಾಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.