ಮೈಸೂರು –
ಕರ್ನಾಟಕ ರಾಜ್ಯ ಮುಕ್ತ ವಿವಿ ಗೆ ಪ್ರವೇಶಾತಿ ಅವಧಿ ವಿಸ್ತರಣೆ – ಅಕ್ಟೋಬರ್ 20 ರವರೆಗೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಮಾಡಿದ ವಿವಿ ಹೌದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2023-24 ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023 ರ ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ
ಈ ಒಂದು ಮಾಹಿತಿ ಯನ್ನು ವಿವಿ ಯ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಇದೇ ಅಕ್ಟೋಬರ್ 20 ರವರೆಗೆ ಸರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಬೆಳಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆಯವರೆಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಮಿತಾ ಸುಬ್ಬಯ್ಯ ಹೇಳಿದ್ದಾರೆ.
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು , ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್ಡಬ್ಲ್ಯು ಮತ್ತು ಪಿಜಿ ರ್ಟಿಫಿಕೇಟ್ ಡಿಪ್ಲೊಮಾ ರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೆಎಸ್ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕ.ರಾ.ಮು.ವಿ ಪ್ರಾದೇಶಿಕ ನರ್ದೇಶಕರು, ಮಡಿಕೇರಿ ಪ್ರಾದೇಶಿಕ ಕೇಂದ್ರ, ರ್ಕಾರಿ ಪದವಿ ಪರ್ವ ಕಾಲೇಜು ಆವರಣ, ಫೀಲ್ಡ್ ಮರ್ಷಲ್ ಕರ್ಯಪ್ಪ ಕ್ರೀಡಾಂಗಣ ಕಟ್ಟಡ ಮಡಿಕೇರಿ-571201 ದೂ.ಸಂ.08272201147, 8073342310, 7618763654, 9141938803, 8296215714, 9611320191 ನ್ನು ಸಂಪರ್ಕಿ ಸಬಹುದಾಗಿದೆ.
ಸುದ್ದಿ ಸಂತೆ ನ್ಯೂಸ್ ಮೈಸೂರು…..