ಬೆಂಗಳೂರು –
ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಫೊರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗುಣಮಖರಾಗಿ ಚೇತರಿಸಿ ಕೊಳ್ಳಲೆಂದು ಶುಭ ಹಾರೈಸಿದ ಗಣ್ಯರು
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೌದು ಬೆಂಗಳೂರಿನ ಫೊರ್ಟೀಸ್ ಆಸ್ಪತ್ರೆಗೆ ದಾಖಲಾ ಗಿರುವ ಇವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರ ದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊ ಳ್ಳಲಿ ಎಂದು ಹಾರೈಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆಯೂ ಕೂಡಾ ಈ ಒಂದು ವಿಚಾರ ಕುರಿತಂತೆ ಸಾಕಷ್ಟು ಪ್ರಮಾಣದಲ್ಲಿ ನೋವಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದುಕೊಳ್ಳುವ ಕುರಿತಂತೆ ಚರ್ಚೆಗಳು ಕೂಡಾ ನಡೆದಿದ್ದವು ಸಧ್ಯ ಈ ಒಂದು ವಿಚಾರ ಕುರಿತಂತೆ ಬೊಮ್ಮಾಯಿ ಯವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಇನ್ನೂ ಸಧ್ಯ ಇವರಿಗೆ ಶಸ್ತ್ರ ಚಿಕಿತ್ಸೆಯಾಗಿದ್ದು ಆಸ್ಪತ್ರೆಯಲ್ಲಿ ವಿಶ್ರಾಂತಿಯನ್ನು ಪಡೆದುಕೊಳ್ಳು ತ್ತಿದ್ದು ವೈಧ್ಯರ ಸಲಹೆ ಮೇರೆಗೆ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದು ನಿಮ್ಮೇಲ್ಲರ ಶುಭ ಹಾರೈಕೆ ಇರಲಿ ಎಂದು ಈ ಒಂದು ವಿಚಾರ ಕುರಿತಂತೆ ಬಸವರಾಜ ಬೊಮ್ಮಯಿ ಯವರು ತಮ್ಮ ಫೇಸ್ ಬುಕ್ ನಲ್ಲಿ ಉಲ್ಲೇಖ ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..