ಧಾರವಾಡ –
ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಯಿಂದ ಕುಂದು ಕೊರತೆ ಸಭೆ – ಅಕ್ಟೋಬರ್ 22 ರಂದು ಎಸ್ ಪಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಸ್ ಪಿ ನೇತ್ರತ್ವದಲ್ಲಿ ಕುಂದು ಕೊರತೆ ಸಭೆಯನ್ನು ಅಕ್ಟೋಬರ್ 22 ರಂದು ಹಮ್ಮಿಕೊಳ್ಳಲಾಗಿದೆ.
ಈ ಒಂದು ಸಭೆಯೂ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ನೇತ್ರತ್ವದಲ್ಲಿ ನಡೆಯಲಿದ್ದು ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದು ಎಸ್.ಪಿ. ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಒಂದು ಮಹತ್ವದ ಸಭೆಯಲ್ಲಿ ಪ.ಜಾ, ಪ.ವ. ಗಳ ಕುಂದು ಕೊರತೆಗಳನ್ನು ಆಲಿಸಲಾಗುತ್ತದೆ.ಜಿಲ್ಲಾ ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಜಿಲ್ಲಾ ಮಟ್ಟದ ಸಭೆಯನ್ನು ಅಕ್ಟೋಬರ್ 22, 2023 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದ ಸಭಾಭವನದಲ್ಲಿ ನಿಗದಿಪಡಿಸ ಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮುಖಂಡರು ಈ ಸಭೆಗೆ ಹಾಜರಾಗಬೇಕೆಂದು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..