This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

BEO ಮನೆಯಲ್ಲೂ ಶೋಧ ಮಾಡಿದ ಲೋಕಾಯುಕ್ತ ಪೊಲೀಸರು – ಮಹತ್ವದ ದಾಖಲೆಗಳನ್ನು ವಶಕ್ಕೆ ತಗೆದುಕೊಂಡು ತನಿಖೆ ಕೈಗೊಂಡ ಲೋಕಾಯುಕ್ತ ಪೊಲೀಸರು…..

WhatsApp Group Join Now
Telegram Group Join Now

ಕುಂದಗೋಳ  –

BEO ಮನೆಯಲ್ಲೂ ಶೋಧ ಮಾಡಿದ ಲೋಕಾಯುಕ್ತ ಪೊಲೀಸರು – ಮಹತ್ವದ ದಾಖಲೆಗಳನ್ನು ವಶಕ್ಕೆ ತಗೆದುಕೊಂಡು ತನಿಖೆ ಕೈಗೊಂಡ ಲೋಕಾಯುಕ್ತ ಪೊಲೀಸರು

ಲೋಕಾಯಕ್ತ ಬಲೆಗೆ ಬಿದ್ದ ಧಾರವಾಡ ಜಿಲ್ಲೆಯ ಕುಂದಗೋಳದ ಕ್ಷೇತ್ರ ಶಿಕ್ಷಣಾಧಿಕಾರಿ ವಿದ್ಯಾ ಕುಂದರಗಿ ಯವರನ್ನ ಲೋಕಾ ಪೊಲೀಸರು ವಶಕ್ಕೆ ತಗೆದುಕೊಂಡಿದ್ದಾರೆ.ಇನ್ನೂ ಇತ್ತ ಧಾರವಾಡದಲ್ಲಿನ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಹೌದು ಅತ್ತ ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಸೌಲಭ್ಯಗಳ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು ಟ್ರ್ಯಾಪ್ ಆಗಿರುವ ವಿದ್ಯಾ ಕುಂದರಗಿ ಯವರನ್ನು ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡುತ್ತಿದ್ದಾರೆ.ಇತ್ತ ಧಾರವಾಡದ ಹೊಯ್ಸಳ ನಗರ ಬಡಾವಣೆಯ ಲ್ಲಿನ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದರು.

ನಿವೃತ್ತ ಶಿಕ್ಷಕ ಮಂಜುನಾಥ ಕುರುವಿನಶೆಟ್ಟಿ ಎಂಬುವರ ದೂರಿನ ಹಿನ್ನಲೆಯಲ್ಲಿ ಎಸ್ಪಿ ಸತೀಶ ಚಿಟಗುಬ್ಬಿ ಮಾರ್ಗದರ್ಶನದಲ್ಲಿ ಈ ಒಂದು ದಾಳಿಯಾಗಿದ್ದು ಬಿಇಒ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದು ಇತ್ತ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ಮಾಡಿ ದರು.

ನಿವೃತ್ತಿ ಹಣ ಮಂಜೂರಿಗೆ ದಾಖಲೆ ರವಾನಿಸಲು ಮಂಜುನಾಥ ಕುರುವಿನಶೆಟ್ಟಿ ಎಂಬುವವಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಜುನಾಥ, ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದಾರೆ.8000 ರೂ. ಲಂಚ ಪಡೆಯುವಾಗ ಬಿಇಒ ಸಿಕ್ಕಿಬಿದ್ದಿದ್ದಾರೆ.

ಈ ಹಿನ್ನೆಲೆ ಧಾರವಾಡ ನಿವಾಸಕ್ಕೆ ದಾಳಿ ಮಾಡಿ ಪರಿಶೀಲನೆ ಮಾಡಿ ಕೆಲವೊಂದಿಷ್ಟು ಮಹತ್ವದ ದಾಖಲೆಗಳನ್ನು ವಶಕ್ಕೆ ತಗೆದುಕೊಂಡಿದ್ದು ತನಿಖೆಯನ್ನು ಮಾಡ್ತಾ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಕುಂದಗೋಳ…..

 


Google News

 

 

WhatsApp Group Join Now
Telegram Group Join Now
Suddi Sante Desk