This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಹಾವೇರಿ

ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ಚಾಲನೆ – ಕ್ಷೇತ್ರದ 50 ಶಾಲೆಗಳಿಗೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ ಮಾನೆ…..

WhatsApp Group Join Now
Telegram Group Join Now

ಹಾನಗಲ್

ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ಚಾಲನೆ – ಕ್ಷೇತ್ರದ 50 ಶಾಲೆಗಳಿಗೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ ಮಾನೆ ಹೌದು

ಹೌದು ಸದಾ ಒಂದಿಲ್ಲೊಂದು ಹೊಸತನ್ನು ಮಾಡಿಕೊಂಡು ಕ್ಷೇತ್ರದಲ್ಲಿ ಅಭಿವೃದ್ದಿಯನ್ನು ಮಾಡಿಕೊಂಡು ಬರುತ್ತಿರುವ ಹಾವೇರಿ ಜಿಲ್ಲೆಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾಡಲು ಪಣ ತೊಟ್ಟಿದ್ದಾರೆ.ಈ ಒಂದು ನಿಟ್ಟಿನಲ್ಲಿ ಸರ್ಕಾರಿ ಶಾಲೆ ಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಮಾಡುತ್ತಿದ್ದಾರೆ

50 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್ ಅಳವಡಿಕೆಗೆ ಚಾಲನೆಯನ್ನು ನೀಡಿದರು. ಸ್ಥಳೀ ಯರ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ಪರಿಕಲ್ಪನೆ ಕಳೆದ 2 ವರ್ಷಗಳ ಹಿಂದೆ ತಾಲ್ಲೂಕಿನಲ್ಲಿ ಚಾಲನೆ ಪಡೆದು ಯಶಸ್ವಿ ಯಾಗಿ ನಡೆಯುತ್ತಿದೆ.ಗುರುಭವನದಲ್ಲಿರುವ ಹ್ಯುಮಾನಿಟಿ ಫೌಂಡೇಷನ್ ಪರಿವರ್ತನ ಕಲಿಕಾ ಕೇಂದ್ರದಲ್ಲಿ ಶನಿವಾರ ತಾಲ್ಲೂಕಿನ 50 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್‌ ಅಳವಡಿಕೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ರಾಜ್ಯ ಸರ್ಕಾರ ಬೇರು-ಚಿಗುರು ಎಂಬ ಶೈಕ್ಷಣಿಕ ಉನ್ನತಿಯ ಹೊಸ ಯೋಜನೆಗೆ ಚಾಲನೆ ನೀಡಿದ್ದು ಸರ್ಕಾರ ಮಾತ್ರವಲ್ಲ,ಸ್ಥಳೀಯರ ಸಹಭಾಗಿತ್ವದಲ್ಲಿ ಶಾಲೆಗಳ ಸುಧಾರಣೆ ಅತ್ಯಂತ ಯಶಸ್ವಿಯಾಗಿ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಮೊದಲ ಹಂತದಲ್ಲಿ ತಾಲ್ಲೂಕಿನ 50 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್‌ ಶಾಲೆಗಳನ್ನಾಗಿ ಪರಿವರ್ತಿ ಸಲಾಗುತ್ತಿದ್ದು ಇದರಿಂದ 10 ಸಾವಿರ ವಿದ್ಯಾರ್ಥಿ ಗಳಿಗೆ ಅನುಕೂಲವಾಗಲಿದೆ.ದಾನಿಗಳು,ವಿವಿಧ ಸಂಸ್ಥೆಗಳ ಸಹಭಾಗಿತ್ವ ಪಡೆದು ಇಂತಹ ಶೈಕ್ಷಣಿಕ ಸೌಲಭ್ಯಗಳನ್ನು ಈ ಹಳ್ಳಿಯ ಮಕ್ಕಳಿಗೆ ನೀಡುವ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಇಂಡಿಯಾ 41 ಕ್ಲಬ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ ಸರಸ್ವತುಲಾ ಮಾತನಾಡಿ ಇಂದಿನ ಮಕ್ಕಳೇ ದೇಶದ ಭವಿಷ್ಯದ ಬುನಾದಿ. ಅವರ ಭವಿಷ್ಯ ರೂಪಿಸುವುದೆಂದರೆ, ದೇಶವನ್ನು ಸದೃಢ ಮಾಡಿದಂತೆ.ರಾಜ್ಯದಲ್ಲಿ 10 ಲಕ್ಷ ಮಕ್ಕಳಿಗೆ ಸ್ಮಾರ್ಟ್‌ ಕ್ಲಾಸ್ ಸೌಲಭ್ಯ ಕಲ್ಪಿಸಿ ಡಿಜಿಟಲ್ ಶಿಕ್ಷಣ ನೀಡುವ ಗುರಿ ನಮ್ಮದು ಎಂದರು.

ಬೆಂಗಳೂರಿನ ಎಕಸೆನ್ ಅಗ್ರಿಸೈನ್ಸ್ ಚೀಫ್ ಆಪರೇಟಿಂಗ್ ಅಫೀಸರ್ ಅನಿಲ್ ಮಲ್ಲಪ್ಪ, ಬಿಇಒ ವಿ.ವಿ.ಸಾಲಿಮಠ.41 ಕ್ಲಬ್ ರಾಷ್ಟ್ರೀಯ ಕೋಶಾಧ್ಯಕ್ಷ ಮಧುಬಾಬು,ಏರಿಯಾ 10 ಚೇರಮನ್ ಕಿರಣ ಹೆಬಸೂರ,ಎಫ್‌ಟಿಡಿಇ ಏರಿಯಾ ಕನ್ವೇನರ್ ಪರಶುರಾಮ ಶಾಲಗಾರ

ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಪ್ರೊ.ಮಾರುತಿ ಶಿಡ್ಲಾಪುರ ಇದ್ದರು.

ಸುದ್ದಿ ಸಂತೆ ನ್ಯೂಸ್ ಹಾನಗಲ್…..


Google News

 

 

WhatsApp Group Join Now
Telegram Group Join Now
Suddi Sante Desk