ಹೈದರಾಬಾದ್ –
ಕಾರು ಅಪಘಾತ ಶಾಸಕಿ ಸಾವು – ಈಗಷ್ಟೇ ಮೊದಲ ಬಾರಿಗೆ ಶಾಸಕಿಯಾಗಿದ್ದ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು….. ನಿಯಂತ್ರ ಣವನ್ನು ಕಳೆದುಕೊಂಡ ಕಾರು ತಡೆಗೋಡೆಗೆ ಡಿಕ್ಕಿ
ಶಾಸಕಿಯೊಬ್ಬರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣವನ್ನು ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟ ಶಾಸಕಿ ಯಾಗಿದ್ದಾರೆ.ರಸ್ತೆ ಬದಿಯ ತಡೆಗೊಡೆದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ(37) ಸಾವನಪ್ಪಿದ್ದಾರೆ.
ಹೈದರಾಬಾದ್ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಈ ಒಂದು ಘಟನೆ ಸಂಭವಿಸಿದೆ.ಲಾಸ್ಯ ನಂದಿತಾ ತಮ್ಮ ಎಸ್ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಎಕ್ಸ್ಪ್ರೆಸ್ವೇಯ ಎಡಭಾಗ ದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಘಟನೆ ಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಚಿಂತಾಜನಕ ವಾಗಿದೆ . ಬಿಆರ್ಎಸ್ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾ ಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.
ಈಗಷ್ಟೇ ಶಾಸಕಿಯಾಗಿ ಅಧಿಕಾರವನ್ನು ಅನುಭವಿಸುತ್ತಿದ್ದರಷ್ಟರಲ್ಲಿಯೇ ಈ ಒಂದು ಘಟನೆ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ಹೈದರಾಬಾದ್…..