This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಯಾದಗಿರಿ

ಶಿಕ್ಷಕ ಸಾಹೇಬಗೌಡ ಅಮಾನತು – ಅಮಾನತು ಮಾಡಿ ಆದೇಶ ಮಾಡಿದ ಡಿಡಿಪಿಐ…..

WhatsApp Group Join Now
Telegram Group Join Now

ಯಾದಗಿರಿ

ಶಿಕ್ಷಕ ಸಾಹೇಬಗೌಡ ಅಮಾನತು – ಅಮಾನತು ಮಾಡಿ ಆದೇಶ ಮಾಡಿದ ಡಿಡಿಪಿಐ ಹೌದು

SSLC ಪರೀಕ್ಷಾ ಕೇಂದ್ರ ಸಾಮೂಹಿಕ ನಕಲು ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಿ ರುವ ಪ್ರಕರಣವೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಈ ಒಂದು ಘಟನೆಯಲ್ಲಿ ಮೇಲ್ವಿಚಾರಕರಾಗಿದ್ದ ಸಾಹೇಬಗೌಡರು ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯವನ್ನು ನಿರ್ವಹಿಸುತ್ತದ್ದರು. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು ಮೊದಲ ದಿನವೇ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿರುವುದು ಬಯಲಾಗಿದೆ.

ಕೊಠಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ವಿದ್ಯಾರ್ಥಿ ಗಳ ಸಾಮೂಹಿಕ ನಕಲು ಬೆಳಕಿಗೆ ಬಂದಿದ್ದು, ಕೊಠಡಿ ಮೇಲ್ವಿಚಾರದ ಸಾಹೇಬಗೌಡ ಎಂಬವರನ್ನು ಅಮಾನತ್ತುಗೊಳಿಸ ಲಾಗಿದೆ ಸುರಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬಗೌಡ ಉಕ್ಕಾಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿಯೇ ಸಾಮೂಹಿಕ ನಕಲು ಕಂಡು ಬಂದಿದೆ.

ಆದರೂ ಶಿಕ್ಷಕರು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.ಮಾತ್ರವಲ್ಲ, ಮುಖ್ಯ ಅಧೀ ಕ್ಷಕರ ಗಮನಕ್ಕೂ ಕೂಡಾ ತಂದಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪರೀಕ್ಷಾ ಅವ್ಯವಹಾರ ಕಂಡು ಬಂದಲ್ಲಿ, ತಕ್ಷಣವೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ನಿಯಮಾನುಸಾರ ಕ್ರಮಕೈಗೊಳ್ಳಲು ಮುಖ್ಯ ಅಧೀಕ್ಷಕರಿಗೆ ಅಧಿಕಾ ರವಿರುತ್ತದೆ.

ಆದರೆ ಸಾಹೇಬಗೌಡ ಉಕ್ಕಾಲಿ ಅವರು ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ.ಈ ಒಂದು ಹಿನ್ನೆಲೆಯಲ್ಲಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಎಚ್‌ಟಿ ಅವರು ಅಮಾನತ್ತುಗೊಳಿಸಿದ್ದಾರೆ. ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೇ ಕೇಂದ್ರಸ್ಥಾನವನ್ನು ತೊರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಯಾದಗಿರಿ…..


Google News

 

 

WhatsApp Group Join Now
Telegram Group Join Now
Suddi Sante Desk