ಮೂಜಗು ತಿಪಟೂರಿನ ರುದ್ರಮುನಿ ಸ್ವಾಮಿಗಳ ಮಹತ್ವದ ಗೌಪ್ಯ ಸಭೆ…..

Suddi Sante Desk

ಹುಬ್ಬಳ್ಳಿ –

ಪ್ರತಿಷ್ಠಿತ ಹುಬ್ಬಳ್ಳಿಯ ಮೂರು ಸಾವಿರಮಠದ ಆಸ್ತಿ ವಿಚಾರದ ಗಲಾಟೆಯ ನಡುವೆ ಮಠದಲ್ಲಿ ಸ್ವಾಮೀಜಿಗಳಿಬ್ಬರ ಗೌಪ್ಯ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಹೌದು ಮೂರು ಸಾವಿರ ಮಠದಲ್ಲಿ ಮೂಜಗುಶ್ರೀ ಮತ್ತು ತಿಪಟೂರಿನ ರುದ್ರಮುನಿ ಸ್ವಾಮಿಗಳ ನಡುವೆ ಮಹತ್ವದ ಮಾತುಕತೆ ನಡೆದಿರುವುದು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ.

ಕಳೆದ ಒಂದು ವರ್ಷದಿಂದ ಮಠದ ಉತ್ತರಾಧಿಕಾರಿ ವಿವಾದ ಹಾಗೂ ಕಳೆದ ಸುಮಾರು ದಿನಗಳಿಂದ ಕೆಎಲ್ಇ ಸಂಸ್ಥೆಗೆ ಆಸ್ತಿ ನೀಡಿರುವ ಕುರಿತು ಸುದ್ದಿಯಲ್ಲಿದ್ದ ಮೂರುಸಾವಿರ ಮಠದಲ್ಲಿ ಗೌಪ್ಯ ಸಭೆ ನಡೆದಿದ್ದು ಹಲವು ಅನುಮಾನ ಹುಟ್ಟು ಹಾಕಿದೆ.

ಮೂರು ಸಾವಿರ ಮಠದ ಆಸ್ತಿ ಪರಭಾರೆ ಕುರಿತು ಮಾತುಕತೆ ನಡೆದಿದೆ ಎನ್ನುವ ಅನುಮಾನ ಮಠದ ಭಕ್ತ ಸಮೂಹದಲ್ಲಿ ಮೂಡಿದೆ. ಮೂರುಸಾವಿರ ಮಠದಲ್ಲಿ ಗೌಪ್ಯ ಸಭೆ ಕುತೂಹಲಕ್ಕೆ ಕಾರಣವಾ ಗಿದೆ.ಕೆಎಲ್ಇ ಸಂಸ್ಥೆಗೆ ಕೋಟ್ಯಂತರ ರೂ.ಗಳ ಜಮೀನು ದಾನ ಮಾಡಿರುವ ಮೂರುಸಾವಿರ ಮಠದ ಸ್ವಾಮೀಜಿಗಳು, ದಿಂಗಾಲೇಶ್ವರ ಸ್ವಾಮೀಜಿ ಹೋರಾಟಕ್ಕೆ ಬೆಚ್ಚಿ ಬಿದ್ದಿದ್ದಾರೆ.

ಮೂರುಸಾವಿರ ಮಠ ಬಿಟ್ಟು ಹಾನಗಲ್ ಮಠಕ್ಕೆ ಹೋಗಲು ತೀರ್ಮಾನಿಸಿದ್ದಾರೆಯೇ ಎಂಬುವಂತ ಸಾಕಷ್ಟು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಮೂಜಗು ಶ್ರೀಗಳ ಮನ ಒಲಿಸಲು ರುದ್ರಮುನಿ ಸ್ವಾಮೀಜಿ ಬಂದಿದ್ದು, ಇವರು ಕೂಡ ‌ಮೂರುಸಾವಿರ ಮಠದ ಉತ್ತರಾಧಿ ಕಾರಿಯ ವಿವಾದಿತ ಸ್ವಾಮೀಜಿಯವರು ಗಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಇವೆಲ್ಲದರ ನಡುವೆ ದಿಂಗಾಲೇಶ್ವರ ಸ್ವಾಮಿಜಿಯ ಮುಂದಿನ ನಡೆ ಏನು ಎಂಬ ಕುರಿತಂತೆ ಕುತೂಹಲ ಮೂಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.