This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಅಕ್ರಮವಾಗಿ ಸಾಗಿಸುತ್ತಿದ್ದ ಶಾಲಾ ಮಕ್ಕಳ ಕ್ಷೀರಭಾಗ್ಯ ಹಾಲಿನ ಪೌಡರ್ ವಶ – ಲಕ್ಷಾಂತರ ರೂಪಾಯಿ ಮೌಲ್ಯದ ಪೌಡರ್ ವಶ ಗುತ್ತಿಗೆದಾರನ ಬಂಧನ…..

ಅಕ್ರಮವಾಗಿ ಸಾಗಿಸುತ್ತಿದ್ದ ಶಾಲಾ ಮಕ್ಕಳ ಕ್ಷೀರಭಾಗ್ಯ ಹಾಲಿನ ಪೌಡರ್ ವಶ – ಲಕ್ಷಾಂತರ ರೂಪಾಯಿ ಮೌಲ್ಯದ ಪೌಡರ್ ವಶ ಗುತ್ತಿಗೆದಾರನ ಬಂಧನ…..
WhatsApp Group Join Now
Telegram Group Join Now

ಬಾಗಲಕೋಟೆ

ಶಾಲಾ ಮಕ್ಕಳಿಗೆ ವಿತರಣೆ ಮಾಡಬೇಕಾಗಿದ್ದ ಹಾಲಿನ ಪೌಡರ್ ನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲ ವನ್ನು ಬಾಗಲಕೋಟೆಯಲ್ಲಿ ಪತ್ತೆ ಮಾಡಲಾಗಿದೆ ಹೌದು ತಾಲ್ಲೂಕಿನ ಸೂಳಿಕೇರಿಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಕೊಡುವ ₹17.90 ಲಕ್ಷ ಮೌಲ್ಯದ 44.7 ಕ್ವಿಂಟಲ್‌ ಹಾಲಿನ ಪುಡಿಯನ್ನು ಮಧ್ಯರಾತ್ರಿ ಬಾಗಲಕೋಟೆ ಸಿಇಎನ್‌ ಪೊಲೀಸ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಾಲಿನ ಪೌಡರ್‌ನೊಂದಿಗೆ 3.25 ಕ್ವಿಂಟಲ್‌ ರಾಗಿ ಹಿಟ್ಟು, 50 ಲೀಟರ್ ಅಡುಗೆ ಎಣ್ಣೆ ಸೇರಿ ಒಟ್ಟು ₹18.14 ಲಕ್ಷ ಮೌಲ್ಯದ ವಸ್ತುಗಳು, ಸಾಗಾಟಕ್ಕೆ ಬಳಸುತ್ತಿದ್ದ ವಾಹನ ವನ್ನು ವಶಪಡಿಸಿಕೊಂಡಿದ್ದಾರೆ, ಆರೋಪಿ ಸಿದ್ದಪ್ಪ ಕಿತ್ತಲಿ ಬಂಧಿಸಲಾಗಿದೆ.

ಜಿಲ್ಲೆಯ ಹುನಗುಂದ, ಬಾದಾಮಿ ತಾಲ್ಲೂಕಿನ ಶಾಲೆ ಗಳಿಗೆ ಹಾಲಿನ ಪೌಡರ್ ನೀಡುವ ಗುತ್ತಿಗೆಯನ್ನು ಮಹಾಲಿಂಗಪುರದ ಶ್ರೀಶೈಲ ಅಂಗಡಿ ಎಂಬುವವರು ಪಡೆದುಕೊಂಡಿದ್ದರು. ಅವರು ಸಿದ್ದಪ್ಪ ಕಿತ್ತಲಿ ಅವರಿಗೆ ಸಬ್‌ ಲೀಸ್‌ ನೀಡಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

ಶಾಲಾ ಅಧಿಕಾರಿಗಳೊಂದಿಗೆ ಶಾಮಿಲಾಗಿ ಶಾಲೆಗಳಿಗೆ ಹಾಲಿನ ಪೌಡರ್‌ ಅನ್ನು ಸಂಪೂರ್ಣವಾಗಿ ಸರಬರಾಜು ಮಾಡದೇ ಉಳಿಸಿಕೊಳ್ಳುತ್ತಿದ್ದರು. ಅದನ್ನು ಅಕ್ರಮ ವಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಕಳುಹಿಸುತ್ತಿದ್ದರು ಎಂದು ದೂರು ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟ…..


Google News

 

 

WhatsApp Group Join Now
Telegram Group Join Now
Suddi Sante Desk