This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಲೋಕಾಯುಕ್ತ ಬಲೆಗೆ ಬಿದ್ದ ASI ಈರಣ್ಣ – ₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಮೊದಲ ಕಂತಿನಲ್ಲಿ ಹಣ ಪಡೆಯುವಾಗ ಟ್ರ್ಯಾಪ್…..

ಲೋಕಾಯುಕ್ತ ಬಲೆಗೆ ಬಿದ್ದ ASI ಈರಣ್ಣ – ₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಮೊದಲ ಕಂತಿನಲ್ಲಿ ಹಣ ಪಡೆಯುವಾಗ ಟ್ರ್ಯಾಪ್…..
WhatsApp Group Join Now
Telegram Group Join Now

ದಾವಣಗೆರೆ

ಲೋಕಾಯುಕ್ತ ಬಲೆಗೆ ASI ರೊಬ್ಬರು ಬಿದ್ದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ ಹೌದು ಗಲಾಟೆ ಪ್ರಕರಣದ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ಕೈಬಿಡಲು ಆರೋಪಿಯಿಂದ ₹ 50,000 ಲಂಚ ಪಡೆ ಯುತ್ತಿದ್ದ ಕೆಟಿಜೆ ನಗರ ಪೊಲಿಸ್‌ ಠಾಣೆಯ ಎಎಸ್‌ಐ ಈರಣ್ಣ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

₹ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಮೊದಲ ಕಂತಿನಲ್ಲಿ ಅರ್ಧ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಎಎಸ್‌ಐ ಈರಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.ಗಲಾಟೆಯ ವಿಚಾರ ವಾಗಿ ಮಣಿಕಂಠ ಆಚಾರ್ಯ, ಅವರ ತಾಯಿ ಭಾಗ್ಯಮ್ಮ ಮತ್ತು ಪತ್ನಿ ಅರ್ಚನಾ ವಿರುದ್ಧ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ಈರಣ್ಣ, ಭಾಗ್ಯಮ್ಮ ಮತ್ತು ಅರ್ಚನಾ ಅವರ ಹೆಸರನ್ನು ದೋಷಾ ರೋಪಪಟ್ಟಿಯಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿ.ಮಧುಸೂದನ್‌, ಪ್ರಭು ಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..


Google News

 

 

WhatsApp Group Join Now
Telegram Group Join Now
Suddi Sante Desk