This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಶಾಕ್ – ಕೋಟ್ಯಾಧೀಶ ಅಧಿಕಾರಿಗಳಲ್ಲಿ ಪತ್ತೆಯಾದ ಅಕ್ರಮ ಆಸ್ತಿ ಕುರಿತು ಕಂಪ್ಲೀಟ್ ಮಾಹಿತಿ…..

ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಶಾಕ್ – ಕೋಟ್ಯಾಧೀಶ ಅಧಿಕಾರಿಗಳಲ್ಲಿ ಪತ್ತೆಯಾದ ಅಕ್ರಮ ಆಸ್ತಿ ಕುರಿತು ಕಂಪ್ಲೀಟ್ ಮಾಹಿತಿ…..
WhatsApp Group Join Now
Telegram Group Join Now

ಬೆಂಗಳೂರು -.

ಹೌದು ಡಿಸೆಂಬರ್ 11 ರಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ ಏಕಕಾಲಕ್ಕೆ ದಾಳಿ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದರು.ಈ ವೇಳೆ ಕೋಟ್ಯಾಂತರ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿದೆ. ಬೆಂಗಳೂರು ಒಂದರಲ್ಲೇ ಐದು ಕಡೆ ದಾಳಿ ಮಾಡಲಾಗಿತ್ತು.

ದಾಳಿಗೆ ಒಳಗಾದ 10 ಅಧಿಕಾರಿಗಳ ಚರಾಸ್ತು, ಸ್ಥಿರಾಸ್ತಿ ಮೌಲ್ಯವನ್ನು ನೋಡೊದಾದರೆ

ಬೆಸ್ಕಾಂ ಅಧೀಕ್ಷಕ ಅಭಿಯಂತರ ಲಕೇಶ್ ಬಾಬು ಅವರ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 6,70,95,000 ಕೋಟಿ ರೂ.
ಕಂದಾಯ ನಿರೀಕ್ಷಕ ಎಸ್.ಜಿ.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 1,82,61,215 ಕೋಟಿ ರೂ.
ಬೆಂಗಳೂರು ಗ್ರಾಮಾಂತರ ಡಿಹೆಚ್​​ಒ ಸುನೀಲ್ ಕುಮಾರ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 6,63,90,000 ಕೋಟಿ ರೂ.
ಬಿಬಿಎಂಪಿ ತೆರಿಗೆ ಇನ್ಸ್​ಪೆಕ್ಟರ್​​​ ಕೃಷ್ಣಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,21,09,551 ಕೋಟಿ ರೂ.
ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಏಕೇಶ್ ಬಾಬು ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 7,92,00,000 ಕೋಟಿ ರೂ. ಪತ್ತೆಯಾಗಿದೆ. ಇವರ ಮನೆಯಲ್ಲಿ ಹಣ ಎಣಿಸುವ ಮಷಿನ್ ಪತ್ತೆಯಾಗಿದೆ.
ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ ಡಿವೈಎಸ್​ಪಿ ನಂಜುಂಡಯ್ಯ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 12,53,00,225 ಕೋಟಿ ರೂ.
ಗದಗ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ ಎಸ್​ಡಿಎ ಲಕ್ಷ್ಮಣ ಕೊನೆರಪ್ಪ ಕರ್ಣಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 2,01,81,000 ಕೋಟಿ ರೂ.
ಕಲಬುರಗಿ ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ರಾಮಪ್ಪ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,58,46,000 ಕೋಟಿ ರೂ.
ಕೊಪ್ಪಳ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ ₹1,61,23,175
ಹಿರಿಯೂರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಎಸ್.ಸುರೇಶ್ ಚರಾಸ್ತಿ ಮತ್ತು ಸ್ಥಿರಾಸ್ತಿ ಮೌಲ್ಯ 3,50,14,417 ಕೋಟಿ ರೂ.
ಈವರೆಗಿನ ಮಾಹಿತಿ ಪ್ರಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​ಒ ಸುನಿಲ್ ಕುಮಾರ್ ಮತ್ತು ಡಿಎಸ್​ಪಿ ನಂಜುಡಯ್ಯ ಹಣದ ತಿಮಿಂಗಿಲಗ ಳಾಗಿದ್ದಾರೆ. ರಾಜಾನುಕುಂಟೆ ಬಳಿ ಇರುವ ನಂಜುಂಡಯ್ಯ ಅವರ ನಿವಾಸ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದರು

.‌ಇದು ಮನೆಯೋ ಅಥವಾ ಅರಮನೆಯೋ ಎಂದು ಬೆರಗಾಗಿದ್ದು ಮನೆಯೊಳಗೆ ಐಶಾರಾಮಿ ವ್ಯವಸ್ಥೆ ಇತ್ತು. ಸ್ವಿಮ್ಮಿಂಗ್ ಪೂಲ್, ಜಿಮ್ ಮತ್ತು ಥಿಯೇಟರ್ ನಂತಹ ಐಶಾರಾಮಿ ವ್ಯವಸ್ಥೆ ಮನೆಯಲ್ಲಿತ್ತು.

ಬೆಂಗಳೂರಿನ ಮಂಜುನಾಥ ನಗರದಲ್ಲಿ ಇರುವ ಡಿಹೆಚ್​ಒ ಸುನಿಲ್ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ, ಸುನಿಲ್ ಮಾತ್ರ ಮನೆಯ ಗೇಟ್ ತೆರೆಯದೆ, ನಾಲ್ಕು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳನ್ನು ಸತಾಯಿಸಿ ದ್ದರು.‌ ಈ ಬಗ್ಗೆಯೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸುನಿಲ್ ಮನೆ ಯಲ್ಲಿ 15 ಲಕ್ಷ ನಗದು ಮತ್ತು ಕೆಜಿ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk