ಬೆಂಗಳೂರು –
ದಿನಾಂಕ 20 ಫೆಬ್ರವರಿ 2025ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೆಶಕರುಪದಾಧಿಕಾರಿಗಳ ಸಮಾವೇಶವು ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಭಾಗವಹಿಸಿ, ಓಪಿಎಸ್ ಜಾರಿ ಗೊಳಿಸುವ ಸ್ಪಷ್ಟ ಸಂದೇಶ ನೀಡಿರುವುದು ರಾಜ್ಯ ಎನ್ಪಿಎಸ್ ನೌಕರರಿಗೆ ಅತೀವ ಸಂತಸ ತಂದಿದೆ. ಇದರ ಜೊತೆ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಶೀಘ್ರ ಜಾರಿಗೊಳಿಸುವ ಭರವಸೆಯು ನೌಕರರಿಗೆ ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಜಿಲ್ಲಾಧ್ಯಕ್ಷರು ಗಳು, ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಯ ಅಧ್ಯಕ್ಷರು, ಜೊತೆಗೆ ತಾಲ್ಲೂಕು-ಜಿಲ್ಲಾ ಹಂತದ ಪದಾಧಿ ಕಾರಿಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು, ಜೊತೆಗೆ ಭಾಗವಹಿಸಿದ ಎಲ್ಲಾ ನಿರ್ದೇಶಕ ಬಂಧುಗಳಿಗೆ ತುಂಬುಹೃದಯದ ಕೃತಜ್ಞತೆಗಳೊಂದಿಗೆ ಧನ್ಯವಾದ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..