ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು ಹೆಚ್ಚಿಸಿ ಭರ್ಜರಿ ಸಿಹಿಸುದ್ದಿ ಯೊಂದನ್ನು ನೀಡಿದೆ ಹೌದು ಸರ್ಕಾರವು ನೌಕರರಿಗೆ ತುಟ್ಟಿಭತ್ಯೆ ಯನ್ನು ಶೇ.1.50ರಷ್ಟು ಹೆಚ್ಚಿಸಿ ಆದೇಶಿಸಿದೆ.ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ಹಂಚಿಕೊಂ ಡಿದ್ದಾರೆ
ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಿನಾಂಕ 01-01-2025ರಿಂದ ಅನ್ವಯವಾಗುವಂತೆ ಶೇ.1.50 ತುಟ್ಟಿಭತ್ಯೆಯನ್ನು ಹೆಚ್ಚಿಸಿ ಅನುಮೋದನೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.10.75ರಿಂದ 12.25ರಷ್ಟು ಅಂದರೇ 1.50ರಷ್ಟು ಹೆಚ್ಚಿಸಿದೆ. ಇಂತಹ ಸಿಎಂ ಸಿದ್ಧರಾಮಯ್ಯಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ನೌಕರರ ಪರವಾಗಿ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..