ಬೆಂಗಳೂರು –
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಇ-ಹಾಜರಾತಿಯನ್ನು ಮಾಡಲು ಫೇಸ್ ರೆಕಗ್ನೇಷನ್ ಆಧಾರಿತ ‘ನಿರಂತರ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ ಸರ್ಕಾರದ ಆದೇಶದಲ್ಲಿ ಏನಿದೆ ಎಂಬ ಕುರಿತು ನೊಡೊ ದಾದರೆ ನಿರಂತರ ಕಾರ್ಯಕ್ರಮದಡಿ ಫೇಸ್ ರೆಕಗ್ನೇಷನ್ ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿ ಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸ ಲಾಗುವುದು
ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 5 ಕೋಟಿ ನೀಡಲಾಗುತ್ತದೆ.ಎಲ್ಲಾ ಹಂತದಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡಿಮೆ ಸಮಯದಲ್ಲಿ ಮಾಡ ಬಹುದು. ವಿದ್ಯಾರ್ಥಿಗಳ ಹಾಜರಾತಿಯಲ್ಲಿ ನಿಖರತೆ ದೊರಕುತ್ತದೆ. ಪ್ರಸ್ತುತ ಹಾಜರಾತಿ ದಾಖಲೆಯಲ್ಲಿನ ನ್ಯೂನ್ಯತೆ ಸರಿಪಡಿಸಿ ನಿಖರ ಹಾಜರಾತಿಯನ್ನು ದಿನಂಪ್ರತಿ ಆಧಾರದ ಮೇಲೆ ಪಡೆಯಬಹುದಾಗಿದೆ.
ಯಾವುದೇ ಶಾಲೆಯ ಹಾಜರಾತಿಯಲ್ಲಿ ಕೊರತೆಯನ್ನು ಸರಿಪಡಿಸಬಹುದು. ವಿವಿಧ ಪ್ರೋತ್ಸಾಹದಾಯಕ ಯೋಜನೆಗಳ ಅನುಷ್ಠಾನಕ್ಕೆ ನಿಖರ ಮಾಹಿತಿ ಲಭ್ಯವಾಗುತ್ತದೆ. ಇದರಿಂದ ಅನಗತ್ಯ ಅಥವಾ ಹೆಚ್ಚುವರಿ ಅನುದಾನ ಹಂಚಿಕೆಯನ್ನು ತಡೆಗಟ್ಟ ಬಹುದು. ಶಾಲಾ ಹಾಜರಾತಿಯ ವರದಿಯನ್ನು ಹೊಂದುವುದರಿಂದ ಆಯಾ ಶಾಲೆಗಳಲ್ಲಿನ ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಬಹುದಾದ ನಿಟ್ಟಿನಲ್ಲಿ ಯೋಜನೆ ರೂಪಿಸಲು ಸಹಕಾರಿಯಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..