ಬೆಂಗಳೂರು –
ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು, ಶಿಕ್ಷಣ ಇಲಾಖೆಯ ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ್ದಾರೆ ಹೌದು ಈ ಕೆಳಕಂಡ ಸಮಸ್ಯೆಗಳ ಬಗ್ಗೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ಭಾ.ಆ.ಸೇ ರವರನ್ನು ಭೇಟಿ ಮಾಡಿ ಚರ್ಚಿಸಿದರು.
ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮುಖ್ಯ ಶಿಕ್ಷಕರು, ಶಿಕ್ಷಕರು, ಉಪನ್ಯಾಸಕರು ಮತ್ತು ಭೋಧಕೇತರ ಅಧಿಕಾರಿ-ಸಿಬ್ಬಂದಿಗಳಿಗೆ ವರ್ಗಾ ವಣೆಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಲಾಯಿತು- ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದಂತೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ನ್ಯಾಯಾಲಯದ ಆದೇಶದಂತೆ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿ (ಬಿ.ಎಲ್.ಓ) ಕರ್ತವ್ಯಕ್ಕೆ ನಿಯೋಜಿಸದಂತೆ ಮನವಿ ಮಾಡಲಾಯಿತು-ಈ ಬಗ್ಗೆ (ಸಿಇಒ) ಮುಖ್ಯ ಚುನಾವಣಾ ಅಧಿಕಾರಿ ರವರೊಂದಿಗೆ ಪತ್ರ ವ್ಯವಹಾರ ನಡೆಸಿ ಶಿಕ್ಷಕರನ್ನು ನಿಯೋಜಿಸದಂತೆ ಕ್ರಮವಹಿಸಲಾಗು ವುದೆಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಭೋಧಕೇತರ ನೌಕರರ ವರ್ಗಾವಣೆ ಕೌನ್ಸಿಲಿಂಗ್ ನಲ್ಲಿ ಪರಸ್ಪರ ವರ್ಗಾವಣೆಗೆ ಅವಕಾಶ ನೀಡುವಂತೆ ಮತ್ತು ಈ ಹಿಂದೆ ಗೈರು ಹಾಜ ರಾದವರನ್ನು ಸಹ ವರ್ಗಾವಣೆಗೆ ಪರಿಗಣಿಸುವಂತೆ ಮನವಿ ಮಾಡಲಾಯಿತು- ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಳ್ಳಾರಿ, ಆರ್.ಮೋಹನ್ ಕುಮಾರ್, ಬಸವರಾಜ್ ಬಳೂಂಡಗಿ, ನೆಲ್ಕುದ್ರಿ ಸದಾನಂದ, ಚೇತನ್ ರಾಜು, ಇತರರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..