This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ – ಜಿದ್ದಾಜಿದ್ದಿನ ಪೈಪೊಟಿಯಲ್ಲಿ ಅತಿ ಹೆಚ್ಚು ಮತ ಪಡೆದು ಗೆದ್ದ ಬಸವರಾಜ…..

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ – ಜಿದ್ದಾಜಿದ್ದಿನ ಪೈಪೊಟಿಯಲ್ಲಿ ಅತಿ ಹೆಚ್ಚು ಮತ ಪಡೆದು ಗೆದ್ದ ಬಸವರಾಜ…..
WhatsApp Group Join Now
Telegram Group Join Now

ಗದಗ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆಯಾದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ ಹಳ್ಳಿಕೇರಿ ಮತ್ತು ಬಸವರಾಜ ಬಳ್ಳಾರಿ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಒಟ್ಟು 69 ಮತದಾರರಿದ್ದು ಅದರಲ್ಲಿ 68 ಮಂದಿ ಮತ ಚಲಾಯಿಸಿದರು ಈ ಪೈಕಿ ನಾಗರಾಜ ಹಳ್ಳಿಕೇರಿ 13 ಮತಗಳನ್ನು ಪಡೆದರೆ; ಬಸವರಾಜ ಬಳ್ಳಾರಿ 55 ಮತಗಳನ್ನು ಪಡೆದು ವಿಜಯಶಾಲಿಯಾದರು.

ಬಸವರಾಜ ಬಳ್ಳಾರಿ ಅವರಿಗೆ ಚುನಾವಣಾ ಅಧಿಕಾರಿ ಪ್ರಮಾಣಪತ್ರ ನೀಡಿದರು.ನೂತನ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ‘ಈ ಗೆಲವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳು ಕಾರಣ’ ಎಂದು ಕೃತಜ್ಞತೆ ಸಲ್ಲಿಸಿದರು.ಇನ್ನೂ ನನ್ನ ಅವಧಿಯಲ್ಲಿ ನೌಕರರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಂತರ ಅವರ ಅಭಿಮಾನಿಗಳು ಹಾಗೂ ನೌಕರರ ವರ್ಗ ಅವರಿಗೆ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಮಾಡಿದರು.

ಸುದ್ದಿ ಸಂತೆ ನ್ಯೂಸ್ ಗದಗ…..


Google News

 

 

WhatsApp Group Join Now
Telegram Group Join Now
Suddi Sante Desk