This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು’ ವಿತರಣೆ ಕುರಿತು ಶಿಕ್ಷಣ ಇಲಾಖೆ’ಯಿಂದ ಆದೇಶ – ಇಲಾಖೆಯ ಆದೇಶ ತಪ್ಪಿದರೆ ಶಿಕ್ಷಕರೇ ಹೊಣೆ ಇಲಾಖೆ ಎಚ್ಚರಿಕೆ…..

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು’ ವಿತರಣೆ ಕುರಿತು ಶಿಕ್ಷಣ ಇಲಾಖೆ’ಯಿಂದ ಆದೇಶ – ಇಲಾಖೆಯ ಆದೇಶ ತಪ್ಪಿದರೆ ಶಿಕ್ಷಕರೇ ಹೊಣೆ ಇಲಾಖೆ ಎಚ್ಚರಿಕೆ…..
WhatsApp Group Join Now
Telegram Group Join Now

ಬೆಂಗಳೂರು

2024-25 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಿರುವ ಸುತ್ತೋಲೆಯಂತೆ ವಾರದ ಆರು ದಿನಗ ಳಂದು ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸದೇ, ತಮ್ಮದೇ ಆದ ವಿಧಾನ ವನ್ನು ಅನುಸರಿಸಿರುವ ಶಾಲಾ ಎಸ್.ಡಿ.ಎಂ.ಸಿ.ರವರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

 

2024-25ನೇ ಸಾಲಿನಿಂದ ಸೆಪ್ಟೆಂಬರ್ 2024 ರಿಂದ ಉಲ್ಲೇಖಿತ (1)ರ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಯಂತೆ ಅನುಷ್ಠಾನಗೊಳಿಸಿರುವಂತೆ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದ ಆರು ದಿನಗಳಂದು ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಮೊಟ್ಟೆ ಸ್ವೀಕರಿ ಸದೇ ಇರುವ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಿಸ ಲಾಗುತ್ತಿದೆ.

ರಾಜ್ಯದ ಕೆಲವು ಶಾಲೆಗಳಲ್ಲಿ ಎಸ್.ಡಿ.ಎಂ.ಸಿ. ರವರು ಸಭೆ ನಡೆಸಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನಗಳು ಮೊಟ್ಟೆ, ಉಳಿದ ಮೂರು ದಿನ ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ, ಇನ್ನೂ ಕೆಲವು ಶಾಲೆಗಳಲ್ಲಿ ಸೋಮವಾರ, ಶನಿವಾರದಂದು ಮೊಟ್ಟೆ ವಿತರಣೆ ಮಾಡದೇ ಬಾಳೆಹಣ್ಣು ವಿತರಣೆ ಮಾಡಲು ನಿರ್ಣಯಿ ಸಿರುವುದು, ಪೋಷಕರ ಒಪ್ಪಿಗೆ ಪತ್ರ ಪಡೆದಿದ್ದಾಗೂ ಸಹ ವಾರದ ಆರೂ ದಿನಗಳಂದು ಮೊಟ್ಟೆ ಸ್ವೀಕರಿಸುವ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸದೇ ಬಾಳೆಹಣ್ಣು ವಿತರಿಸುವ ಬಗ್ಗೆ ಏಕಪಕ್ಷೀಯವಾಗಿ ನಿರ್ಣಯಿಸಿರು  ವುದು, ಇಲಾಖೆಯ ಸೂಚನೆಗಳನ್ನು ಎಸ್.ಡಿ.ಎಂ.ಸಿ. ರವರು ಕೈಬಿಟ್ಟಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಮುಂದುವರೆದು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 07.07.2025 ರಂದು ಈ ಕಛೇರಿಯಿಂದ ಜ್ಞಾಪನವನ್ನು (ಉಲ್ಲೇಖ-3) ಹೊರಡಿಸಿದ್ದು, ಸಂಬಂಧಿ ಸಿದ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅನುಷ್ಠಾನಾ  ಧಿಕಾರಿಗಳಿಗೆ ಇ-ಮೇಲ್ ಮೂಲಕ ದಿನಾಂಕ 07.07. 2025 ರಂದು ಜ್ಞಾಪನವನ್ನು ಕಳುಹಿಸಲಾಗಿದೆ. ಸದರಿ ಜ್ಞಾಪನಕ್ಕೆ ತೆಗೆದುಕೊಂಡಿರುವ ಕ್ರಮದ ಕುರಿತು ಜಿಲ್ಲೆ ಗಳಿಂದ ದಿನಾಂಕ:15.07.2025 ರ ಒಳಗಾಗಿ ವರದಿ ಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.

ಆದರೂ ಇದುವರೆಗೂ ಯಾವುದೇ ಅಧಿಕಾರಿಗಳಿಂದ ಈ ಕುರಿತು ಕಛೇರಿಗೆ ವರಿದಿಗಳನ್ನು ಸಲ್ಲಿಸಿರುವುದಿಲ್ಲ. ದಿನಾಂಕ: 21.07.2025 ರ ಒಳಗಾಗಿ ಕಛೇರಿಗೆ ಈ ಕುರಿತು ವರದಿ ಸಲ್ಲಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಜರುಗಿಸಲಾಗುದು ಎಂದು ಈ ಮೂಲಕ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……


Google News

 

 

WhatsApp Group Join Now
Telegram Group Join Now
Suddi Sante Desk