ಚಿಂತಾಮಣಿ –
ಗರ್ಭಿಣಿ, ಅಂಗವಿಕಲ ಹಾಗೂ ತೀವ್ರತರ ಕಾಯಿಲೆ ಇರುವ ಶಿಕ್ಷಕರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದಿಂದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಮನವಿ ಸಲ್ಲಿಸಲಾಯಿತು.
ಸಮೀಕ್ಷೆ ಅವಧಿಯಲ್ಲಿ ದಸರಾ ಹಾಗೂ ನವರಾತ್ರಿ ಹಬ್ಬಗಳಿವೆ. ಶಿಕ್ಷಕರು ಹಬ್ಬಗಳಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯನ್ನು ಒಂದು ವಾರ ಮುಂದೂಡಬೇಕು. ವರ್ಷಪೂರ್ತಿ ದುಡಿಯುವ ಶಿಕ್ಷಕರು ಕುಟುಂಬದ ಜೊತೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದೆ.
ಗರ್ಭಿಣಿ, ಬಾಣಂತಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕ, ಶಿಕ್ಷಕಿಯರು, ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕ ಶಿಕ್ಷಕಿಯರು ಹಾಗೂ ವಯೋನಿವೃತ್ತಿ ಅಂಚಿನಲ್ಲಿರುವ ವರು ಮನೆ-ಮನೆಗೂ ತಿರುಗಿ ಸಮೀಕ್ಷೆಯಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ಅಂತಹ ಶಿಕ್ಷಕರಿಗೆ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.
ರಜಾ ಅವಧಿ ಮತ್ತು ಹೆಚ್ಚುವರಿಯಾಗಿ ಗಣತಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಗೌರವಧನ ಹಾಗೂ ಗಳಿಕೆ ರಜೆಯನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಸ್ವೀಕರಿಸಿದರು. ಕಾನೂನಿನಂತೆ ಹಾಗೂ ಸಾಧ್ಯವಾದಷ್ಟು ಶಿಕ್ಷಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಭರವಸೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್. ಅಶೋಕ್ ಕುಮಾರ್, ಪಿ.ಪಿಳ್ಳನ್ನ ಸೇರಿದಂತೆ ಸಂಘದ ಪದಾಧಿಕಾರಿಗಳು ನಿಯೋಗದಲ್ಲಿದ್ದರು.
ಸುದ್ದಿ ಸಂತೆ ನ್ಯೂಸ್ ಚಿಂತಾಮಣಿ……