ಬೆಂಗಳೂರು –
ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸಂಪುಟ ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಸಚಿವ ಸಂಪುಟ ಅನುಮೋದನೆ ಹೌದು ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ ಎಂಬಂತೆ ಒಂದು ದಿನ ಋತುಚಕ್ರ ರಜೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪನಿ, ಕೈಗಾರಿಕಾ ವಲಯ ದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತು ಚಕ್ರ ರಜೆ ನೀತಿ 2025 ಜಾರಿಗೆ ತರುವ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ, ಖಾಸಗಿ ಕಂಪನಿ ಸೇರಿ ದಂತೆ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರದ ರಜೆ ನೀಡಲು ತೀರ್ಮಾನ ಕೈಗೊಂಡಿದ್ದಾರೆ.
ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ನೀಡುವ ಬಗ್ಗೆ 18 ಸದಸ್ಯರ ಸಮಿತಿ ಇತ್ತೀಚೆಗೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಋತುಚಕ್ರದ ಅವಧಿ ಯಲ್ಲಿ ಮಹಿಳೆಯರಲ್ಲಿ ಆಗುವ ಶಾರೀರಿಕ ಬದಲಾವಣೆ, ಸಂಕಷ್ಟ, ಸವಾಲು, ವಿಶ್ರಾಂತಿ ಅಗತ್ಯದ ಬಗ್ಗೆ ಪ್ರಸ್ತಾಪಿ ಸಿದ್ದು, ಈ ಹಿನ್ನೆಲೆಯಲ್ಲಿ ಬಿಹಾರ, ಕೇರಳ, ಒಡಿಶಾ ರೀತಿ ರಾಜ್ಯದಲ್ಲಿಯೂ ರಾಜ್ಯ ನೀತಿ ಜಾರಿಗೆ ಒಲವು ವ್ಯಕ್ತವಾಗಿತ್ತು.
ಇನ್ನೂ ಈ ಒಂದು ವಿಚಾರ ಕುರಿತು ಕೂಡಾ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕೂಡಾ ಧ್ವನಿ ಎತ್ತಿತ್ತು ಇದೆಲ್ಲದರ ಪರಿಣಾಮವಾಗಿ ಸಧ್ಯ ರಜೆ ನೀಡಲು ಸಚಿವ ಸಂಪುಟದ ಸಭೆ ಒಪ್ಪಿಗೆ ನೀಡಿದ್ದು ಅನುಮೋ ದನೆ ನೀಡಿದ್ದು ರಾಜ್ಯದ ಮಹಿಳಾ ಶಿಕ್ಷಕಿಯರ ಸಮಸ್ಯೆ ಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರಿಗೆ ಸಮಸ್ತ ಮಹಿಳಾ ಶಿಕ್ಷಕಿಯರ ಪರವಾಗಿ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..