ಹುಬ್ಬಳ್ಳಿ-
ಕಲಘಟಗಿ ತಾಲೂಕಿನ ಗಂಜಿಗಟ್ಟಿಯಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲಾಗಿದೆ.ಸಾರ್ವಜನಿಕರ ತುರ್ತು ಸೇವೆಗಾಗಿ ‘112 ಎರಾಸ್’ ಸೇವೆಯಿಂದ ವಿವಾಹ ತಡೆಯಲಾಗಿದೆ.

‘112’ಕ್ಕೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ಗಂಜಿಗಟ್ಟಿ ಗ್ರಾಮದ ಬಸವೇಶ್ವರ ನಗರದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ತಡೆ ಹಿಡಿದಿದ್ದಾರೆ.

ಇದೆ ವೇಳೆ ಪಾಲಕರಿಗೆ ತಿಳಿ ಹೇಳಿ ಕೆಲವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಯಿತು.