This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಸಮೀಕ್ಷೆಯ ಕಾರ್ಯದಿಂದ ಶಿಕ್ಷಕರಿಗೆ ಬಿಡುಗಡೆಯ ಭಾಗ್ಯ – ಶಿಕ್ಷಕರ ಧ್ವನಿಯಾದ ಸುದ್ದಿ ಸಂತೆ ವರದಿಗೆ ಸ್ಪಂದನೆ…..ಮನವಿ ಮಾಡಿದ್ದ KSPSTA…..

ಸಮೀಕ್ಷೆಯ ಕಾರ್ಯದಿಂದ ಶಿಕ್ಷಕರಿಗೆ ಬಿಡುಗಡೆಯ ಭಾಗ್ಯ – ಶಿಕ್ಷಕರ ಧ್ವನಿಯಾದ ಸುದ್ದಿ ಸಂತೆ ವರದಿಗೆ ಸ್ಪಂದನೆ…..ಮನವಿ ಮಾಡಿದ್ದ KSPSTA…..
WhatsApp Group Join Now
Telegram Group Join Now

ಬೆಂಗಳೂರು

ಕಳೆದ ಹಲವು ದಿನಗಳಿಂದ ಬಿಡುವಿಲ್ಲದೆ  ಸಮೀಕ್ಷೆ ಕಾರ್ಯದಲ್ಲಿ ತೋಡಗಿಕೊಂಡಿದ್ದ ಶಿಕ್ಷಕರನ್ನು  ಬಿಡುಗಡೆಗೊಳಿಸಲಾಗಿದೆ ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು.ಬೆಂಗಳೂರು ಸೇರಿ ದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025 ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇನ್ನೂ ದಸರಾ ರಜೆಯ ನಡುವೆ ಬಿಡುವಿಲ್ಲದೆ ಸಮೀಕ್ಷೆ ಕಾರ್ಯ ಮಾಡಿ ಮತ್ತೆ ದೀಪಾವಳಿ ಯ ನಡುವೆ ರಜೆ ಸಿಗದೆ ಆತಂಕದಲ್ಲಿದ್ದ ಶಿಕ್ಷಕರಿಗೆ ದೊಡ್ಡ ತಲೆನೋವು ಆಗಿತ್ತು ಈ ಒಂದು ವಿಚಾರ ಕುರಿತು ಸುದ್ದಿ ಸಂತೆ ವರದಿ ಮಾಡಿತ್ತು ಸ್ಪಂದಿಸಿದ ರಾಜ್ಯ ಸರ್ಕಾರ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ

ಇನ್ನೂ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ.ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk