ನಿಂತ ಕಂಟೈನರ್ ಗೆ ಕಾರು ಡಿಕ್ಕಿ – ಅಬಕಾರಿ ಅಧಿಕಾರಿ ಸೇರಿ ನಾಲ್ವರ ಸಾವು….

Suddi Sante Desk

ಹಾಸನ-

ನಿಂತುಕೊಂಡಿದ್ದ ಕಂಟೈನರ್‌ಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ‌.ಘಟನೆಯಲ್ಲಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಹಾಗೂ ಮೂವರು ಐಟಿ ಉದ್ಯೋಗಿಗಳು ಮೃತಪಟ್ಟಿದ್ದಾರೆ‌.

ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಸ್ನೇಹಿತರಾದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ‌.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹಾಸನ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಸಮೀಪ ಕಂಟೈನರ್‌ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೇತನ ಅಬಕಾರಿ ಇನ್ಸ್ಪೆಕ್ಟರ್ ಆಗಿದ್ದು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಡೂಟಿ ರಿಪೋರ್ಟ್ ಮಾಡಿಕೊಳ್ಳಲು ಹೋಗತಾ ಇದ್ದರು.ಇವರೊಂದಿಗೆ ಮೂವರು ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.