ಮಗಳ ಮದುವೆಗೆ ಕ್ಷೇತ್ರದ ಜನರಿಗೆ ಡಿಕೆಶಿ ಭರ್ಜರಿ ಗಿಪ್ಟ್……

Suddi Sante Desk

ಬೆಂಗಳೂರು –

ಅಂತೂ ಇಂತೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿಯ ವಿವಾಹ ಅದ್ದೂರಿಯಾಗಿ ನೆರವೇರಿತು. ಇನ್ನೂ ಮಗಳ ಮದುವೆ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕನಕಪುರ ಕ್ಷೇತ್ರದ ಜನರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಉಡುಗೊರೆ ಕಳಿಸಿದ್ದಾರೆ.

ಕಾಫಿ ಡೇ ಮಾಲೀಕ ದಿ. ಸಿದ್ದಾರ್ಥ ಹೆಗಡೆ ಪುತ್ರ ಅಮರ್ತ್ಯ ಹೆಗಡೆ ಹಾಗೂ ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ವಿವಾಹ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು .ಈ ಹಿನ್ನಲೆಯಲ್ಲಿ ಡಿಕೆಶಿ ಸಹೋದರರು ರಾಮನಗರದ ಕನಕಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

ಹೌದು ಮಗಳ ಮದುವೆಗೆ ಪ್ರತಿ ಮನೆ ಮನೆಗೂ ಉಡುಗೊರೆಯನ್ನು ತಲುಪಿಸಿದ್ದಾರೆ.ಪುರುಷರಿಗೆ ರೇಡ್ ಅಂಡ್ ಟೇಲರ್ ಕಂಪನಿಯ ಪ್ಯಾಂಟ್, ಶರ್ಟ್. ಮಹಿಳೆಯರಿಗೆ ಬನ್ನಾರಸ್ ಕಂಪನಿಯ ದುಬಾರಿ ಸೀರೆ ಹಾಗೂ ಹಿರಿಯರಿಗೆ ಪಂಚೆ, ಶರ್ಟ್ ಉಡುಗೊರೆ ನೀಡಲಾಗಿದೆ.

ಕ್ಷೇತ್ರದ ಪ್ರತಿ ಗ್ರಾಮದ ಜನರಿಗೂ ತಮ್ಮ ಮಗಳ ಮದುವೆಯ ಉಡುಗೊರೆ ನೀಡಿರುವ ಡಿಕೆಶಿ ಸಹೋದರರು ಸುಮಾರು 2.50 ಲಕ್ಷಕ್ಕೂ ಹೆಚ್ಚು ಜನರಿಗೆ ಮದುವೆ ಉಡುಗೊರೆಗಳನ್ನು ತಲುಪಿಸಿದ್ದಾರೆ.

ಪ್ರತಿ ಸೀರೆಯ ಬೆಲೆ 3,500 ರಿಂದ 5000 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನೂ ಪ್ಯಾಂಟ್, ಶರ್ಟ್‌ಗೆ 3000 ದಿಂದ 4,500 ಸಾವಿರ ರೂ. ಎಂದು ಜನರೇ ಹೇಳುತ್ತಿದ್ದಾರೆ.

ಪ್ರತಿ ಗ್ರಾಮದಲ್ಲೂ ಡಿ‌. ಕೆ. ಶಿವಕುಮಾರ್ ಬೆಂಬಲಿಗರು ಮನೆ ಮನೆಗೂ ತೆರಳಿ ಉಡುಗೊರೆ ಹಂಚಿಕೆ ಮಾಡಿದ್ದಾರೆ. ಕೋವಿಡ್ ಕಾರಣದಿಂದಾಗಿ ಕ್ಷೇತ್ರದ ಜನರು ವಿವಾಹದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಒಂದು ಕಾರಣಕ್ಕಾಗಿ ಮಗಳ ಮದುವೆಗೆ ಗಿಪ್ಟ್ ನೀಡಿದರು

ಕೋವಿಡ್ ನಿಯಮಗಳು ಇಲ್ಲದಿದ್ದರೆ ಕನಕಪುರದಲ್ಲಿಯೇ ಅದ್ದೂರಿ ವಿವಾಹವನ್ನು ನಡೆಸುವ ಯೋಜನೆಯನ್ನು ಡಿ. ಕೆ. ಶಿವಕುಮಾರ್ ಹಾಕಿಕೊಂಡಿದ್ದರು. ಆದರೆ, ಇಂದು ಸರಳವಾಗಿ ಬೆಂಗಳೂರಿನಲ್ಲಿ ವಿವಾಹ ನಡೆಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.