ಮಗುವನ್ನು ಕೊಲೆ ಮಾಡಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ

Suddi Sante Desk

ಗದಗ –

ಆತ ಕಡುಪಾಪಿ ತಂದೆ, ತನ್ನ ಕೈಯಿಂದ ಮಗುವನ್ನು ಮುದ್ದಾಡಬೇಕಾಗಿತ್ತು. ಆದರೆ ಈತ ಒಂದೂವರೆ ವರ್ಷದ ಮಗಳನ್ನು ಕೊಂದ ಪಾಪಿ. ಅಪರಾಧಿ ತಂದೆಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಮಹತ್ವದ ಆದೇಶ ನೀಡಿದೆ.

ಈತ ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತಗೌಡ ಪಾಟೀಲ್ ಎಂಬ ಅಪರಾಧಿ. ಆದರೆ ಈತ 2015ರ ಏಪ್ರಿಲ್ 6 ರಂದು ತನ್ನ ಒಂದೂವರೆ ವರ್ಷದ ಮಗುವನ್ನು ಅಪಹರಿಸಿ, ಗಜೇಂದ್ರಗಡದ ಕಾಲಕಾಲೇಶ್ವರ ಬೆಟ್ಟದಲ್ಲಿ ಕತ್ತುಹಿಸುಕಿ ಕೊಲೆ ಮಾಡಿದ್ದ. ಅಲ್ಲದೇ, ಮಗುವಿನ ಮೃತದೇಹವನ್ನೂ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ.

ಈತ 2013 ರಲ್ಲಿ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಬಳಿಕ ಕೆಲವು ತಿಂಗಳ ನಂತರ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಪತಿಯ ಕಿರುಕುಳದಿಂದ ನೊಂದಿದ್ದ ಮಹಿಳೆ ಮಹಿಳಾ ಸಾಂತ್ವನ ಕೇಂದ್ರದ ಮೊರೆ ಹೋಗಿದ್ದಳು.

ಈ ಸಮಯದಲ್ಲಿ ಹೆಣ್ಣು ಮಗು ಜನಿಸಿತ್ತು. ಹೀಗಾಗಿ ದಂಪತಿಯನ್ನು ಕೂಡಿಸಿ ಸಂಧಾನ ಮಾಡಲಾಗಿತ್ತು. ಹಿರಿಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಪತ್ನಿ ಮತ್ತು ಮಗುವನ್ನು ಚೆನ್ನಾಗಿ ನೋಡಿಕೊಳ್ಳು ವುದಾಗಿ ಹೇಳಿ ಪ್ರಶಾಂತ ಗೌಡ ತನ್ನ ಪತ್ನಿ ಮತ್ತು ಮಗುವನ್ನು ತಮ್ಮೊಂದಿಗೆ ಕರೆದೊಯ್ದಿದ್ದರು.

ಈ ಕುರಿತು ರೋಣ ಪೊಲೀಸರು ಪ್ರಕರಣವನ್ನು ಭೇದಿಸಿದಾಗ ಹೆತ್ತ ತಂದೆಯೇ ಕೊಲೆ ಮಾಡಿರುವುದು ಸಾಬೀತಾಗಿದೆ. ಈ ಕುರಿತು ಪರ- ವಿರೋಧ ವಾದ ಆಲಿಸಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್, ಅಪರಾಧಿಕಾರಿಗೆ ಮರಣ ದಂಡನೆ ವಿಧಿಸಿ ಆದೇಶಿಸಿದ್ದಾರೆ ಎಂದು ಸಾರ್ವಜನಿಕ ಅಭಿಯೋಜಕ ಬಿ.ವಿ.ಪಾಟೀಲ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.