ಎರಡು ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ – ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಕೊಡ್ತೀನಿ

Suddi Sante Desk

ಬೆಂಗಳೂರು –

2 ವರ್ಷದಲ್ಲಿ ನಾವು ಮತ್ತೆ 100% ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ವ್ಯಕ್ತ ಪಡಿಸಿದರು.

‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀ ಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ ಸಹಿಸಿಕೊಳ್ಳೊಕೆ ಆಗುತ್ತಾ? ಅದಕ್ಕೆ ಇನ್ನೆರೆಡು ವರ್ಷದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರ್ತಿವಿ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೋಡ್ತಿವಿ. ಎಷ್ಟು ದುಡ್ಡು ಬೇಕಾದ್ರು ಖರ್ಚಾಗಲಿ. ಇದ್ರಲ್ಲಿ ಯಾವುದೇ ಅನುಮಾನ ಇಲ್ಲ. 100 ಪರ್ಸೆಂಟ್‌ ವಿ ವಿಲ್‌ ಕಮ್‌ ಬ್ಯಾಕ್‌’ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.