ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿಗೆ ತಕರಾರು ಸಲ್ಲಿಸಿದ ಸಿಬಿಐ

Suddi Sante Desk

ಬೆಂಗಳೂರು –

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಗೆ ತಕರಾರು ಅರ್ಜಿಯನ್ನು ಸಿಬಿಐ ದವರು ಸಲ್ಲಿಸಿದ್ದಾರೆ.ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಗೆ ಸಿಬಿಐ ತಕರಾರು ಅರ್ಜಿ ಸಲ್ಲಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು
ವಾದ ಪ್ರತಿವಾದಕ್ಕೆ ಅವಕಾಶ ನೀಡಿ ಪ್ರಕರಣವನ್ನು ಮಾ 6ಕ್ಕೆ ಅಂದರೆ ನಾಳೆಗೆ ಮುಂದೂಡಿದೆ.ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ ಕೆಲವೊಂದು ಮಹತ್ವದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ವಿಚಾರಣೆ ಮುಂದೂಡಿದರು.ಮಾ.6 ರಂದು ನಡೆಯುವ ವಾದ ಪ್ರತಿವಾದ ತೀವ್ರ ಕುತೂಹಲ ಕೆರಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.