ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರಕ್ಕೆ ದೊಡ್ಡ ಶಾಕ್ – ಹೋರಾಟವನ್ನು ತೀವ್ರಗೊಳಿಸಲು ನಿರ್ಧಾರ

Suddi Sante Desk

ಬೆಂಗಳೂರು –

ಪಂಚಮಸಾಲಿ ಸಮಾಜಕ್ಕೆ ಸದ್ಯಕ್ಕೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಖಡಕ್ ರಾಜ್ಯ ಸರ್ಕಾರ ಸಂದೇಶ ರವಾನಿಸಿದ ಬೆನ್ನಲ್ಲೇ ಹೋರಾಟವನ್ನು ತೀವ್ರಗೊಳಿಸಲು ಸಮಾಜದವರು ನಿರ್ಧರಿಸಿದ್ದಾರೆ. ಪಂಚಮಸಾಲಿ ಅಷ್ಟೇ ಅಲ್ಲ, ಸದ್ಯಕ್ಕೆ ಯಾವುದೇ ಸಮುದಾಯದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ಪರವಾಗಿ ಸಚಿವರು ಪಂಚಮ ಸಾಲಿ ಶ್ರೀಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ.ಇದನ್ನು ಒಪ್ಪದ ಸಮುದಾಯದ ಮುಖಂಡರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ಹೌದು 2 ಎ ಮೀಸಲಾತಿಗಾಗಿ ಸರ್ಕಾರದ ವಿರುದ್ಧ ಪಂಚಮಸಾಲಿ ಸಮುದಾಯದವರು ಮತ್ತೆ ಸಿಡಿದೆದ್ದಿದ್ದಾರೆ. ಹೋರಾಟವನ್ನು ಮತ್ತಷ್ಟು ತೀವ್ರ ಗೊಳಿಸಲು ಸಭೆಯಲ್ಲಿ ತಿರ್ಮಾನಿಸಿದ್ದಾರೆ. ಮತ್ತೊಂದು ಸುತ್ತಿನ ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸರ್ಕಾರದ ಮೇಲೆ ಒತ್ತಡ ತರಲು ಹೋರಾಟ ಮುಂದುವರೆಸಲಾಗುವುದು. ನಿನ್ನೆ ನಡೆದ ರೌಂಡ್ ಟೇಬಲ್ ಮೀಟಿಂಗ್ ನಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ಮೀಸಲಾತಿಗಾಗಿ ಒತ್ತಾಯಿಸಿ ಪಾದಯಾತ್ರೆ, ಬೃಹತ್ ಸಮಾವೇಶ ನಡೆಸಿ ಧರಣಿ ಕೈಗೊಂಡಿರುವ ಪಂಚಮಸಾಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ಹೋರಾಟ ಮುಂದುವರೆಸ ಲಾಗುವುದು. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೇಳಲಾಗಿದೆ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.