ಬೆಳಗಾವಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಬಿರುಸಿನ ಪ್ರಚಾರ – ಪಕ್ಷದ ಅಭ್ಯರ್ಥಿ ಪರ ಪ್ರಚಾರ…..

Suddi Sante Desk

ಬೆಳಗಾವಿ –

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಪ್ರಚಾರದ ಕಾವು ರಂಗೇರುತ್ತಿದೆ‌.ಇನ್ನೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರವಾಗಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಭಾನುವಾರ ಭರ್ಜರಿ ಪ್ರಚಾರ ನಡೆಸಿದರು.

ಬೆಳಗಾವಿಯ ಯಳ್ಳೂರು, ಧಾಮಣೆ, ಮಚ್ಚೆ, ಮಚಗಾಂವ್ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ವಿವಿಧ ಮುಖಂಡರನ್ನು ಭೇಟಿ ಮಾಡಿದ ಶಾಸಕರು ಪಕ್ಷದ ಅಭ್ಯರ್ಥಿ ಪರವಾಗಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೇ ಶಾಸಕರು ಅಬ್ಬರದ ಪ್ರಚಾರ ಮಾಡಿದರು.ಇನ್ನೂ ಶಾಸಕ ರೊಂದಿಗೆ ಈ ಒಂದು ಪ್ರಚಾರದಲ್ಲಿ ಹು-ಧಾ ಮಹಾ ನಗರ ಪಾಲಿಕೆ ಮಾಜಿ ಸದಸ್ಯ ವಿಜನಗೌಡ ಪಾಟೀಲ ಮುಖಂಡ ಪ್ರಸನ್ನ ಮಿರಜಕರ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.