ಬಿಜೆಪಿ ಶಾಸಕರಿಂದ ದೌರ್ಜನ್ಯ ವಂತೆ CM ಮಗನ ಮುಂದೆ ನೋವು ತೊಡಿಕೊಂಡ ಮಹಿಳೆಯರು……

Suddi Sante Desk

ಚಿಕ್ಕಮಗಳೂರು –

ತರೀಕೆರೆ ಬಿಜೆಪಿ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಪುತ್ರ ವಿಜಯೇಂದ್ರ ಅವರ ಮುಂದೆ ಮಹಿಳೆಯರು ಕಣ್ಣೀರು ಹಾಕಿದ ಘಟನೆ ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ನಡೆಯಿತು.

ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದರು. ಈ ಸಂದರ್ಭ ವಿಜಯೇಂದ್ರ ಅವರ ಮುಂದೆ ಕಣ್ಣೀರು ಹಾಕಿದ ಮಹಿಳೆಯರು, ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

7 ವರ್ಷದ ಹಿಂದೆ ಚಿಕ್ಕಮಗಳೂರು ಮೂಲದ ಪ್ರಸನ್ನ ಅವರ ಕುಟುಂಬ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ 50 ಎಕರೆ ಜಮೀನು ಖರೀದಿ ಮಾಡಿದ್ದರು.

ಈ ಸಂಬಂಧ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದು, ಪ್ರಕರಣ ನ್ಯಾಯಾಲಯದಲ್ಲಿ ದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆ.

ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಕೊಡಿ. ಇಲ್ಲವೇ ದಯಾಮರಣ ಕೊಡಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು ಒಟ್ಟಾರೆ ಬಿಜೆಪಿ ಶಾಸಕರೊಬ್ಬರ ದೌರ್ಜನ್ಯ ಕುರಿತು ನೋವನ್ನು ಹೇಳಿಕೊಂಡಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.