ಗಣ್ಯರಿಗೆ ಬೆದರಿಕೆ ಗಂಭೀರವಾಗಿ ಪರಿಗಣಿಸಿದ್ದೇವೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ

Suddi Sante Desk

ಬೆಂಗಳೂರು –

ಮಾಜಿ ಸಚಿವರಾದ ಬಿ ಟಿ ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಉಗ್ರ ಕ್ರಮ‌ ಜರುಗಿಸುವುದಾಗಿ ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು‌ ಈ ಸಂಬಂಧ ಲಲಿತಾ ನಾಯಕ್ ಅವರು ದೂರು ಸಲ್ಲಿಸಿ ರುವುದು ಗೊತ್ತಾಗಿದೆ ಎಂದರು.

ಲಲಿತಾ ನಾಯಕ್ ಅವರು ಹಿರಿಯ ಸಾಹಿತಿ, ಗೌರವಾನ್ವಿತ ವ್ಯಕ್ತಿ ಮಾಜಿ ಸಚಿವರು ಅವರು ಬೆದರಿಕೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಪ್ರಕರಣವನ್ನು ಸರ್ಕಾರಿ ಗಂಭೀರ. ವಾಗಿ ಪರಿಗಣಿಸುತ್ತದೆ ಎಂದರು.

ಇನ್ನೂ ಪ್ರಕರಣದ ಸಂಪೂರ್ಣ ತನಿಖೆಯನ್ನು ಮಾಡುತ್ತೇವೆ ಇದರ ಹಿಂದೆ ಯಾರೇ ಇದ್ದರೂ ಕ್ರಮ ಜರುಗಿಸುತ್ತೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.