ಕ್ಷಿಪ್ರ ರಾಜಕೀಯ ಬೆಳವಣಿಗೆ – CM ಭೇಟಿಯಾದ 30 ಕ್ಕೂ ಹೆಚ್ಚು ಶಾಸಕರು

Suddi Sante Desk

ಬೆಂಗಳೂರು –

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರವಾಗಿ ರಾಜಕೀಯ ಬೆಳವಣಿಗೆಯಾಗಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ದೂರು ಕೊಟ್ಟಿದ್ದಾರೆ.ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಬಿಎಸ್ ವೈ ಭೇಟಿಯಾಗಿ ದೂರು ನೀಡಿದ್ದಾರೆ. 30 ಕ್ಕೂ ಹೆಚ್ಚು ಬಿಜೆಪಿ ಶಾಸಕರಿಂದ ಯತ್ನಾಳ್ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಯತ್ನಾಳ್ ಹೇಳಿಕೆಗಳು ಪಕ್ಷಕ್ಕೆ ಭಾರೀ ಮುಜುಗರ ತರುತ್ತಿವೆ. ಮುಂದೆ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿವೆ. ಅಲ್ಲದೇ ಉಪಚುನಾವಣೆಯನ್ನು ಎದರಿಸುತ್ತಿದ್ದೇವೆ. ಇಂಥಹ ಸಮಯದಲ್ಲಿ ಯತ್ನಾಳ್ ಬಾಯಿಗೆ ಬಂದ ಹಾಗೇ ಮಾತಮಾಡುತ್ತಿದ್ದಾರೆ. ಇದಕ್ಕೆ ನೀವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಒತ್ತಾಯ ಮಾಡಿದ್ದಾರೆ.

ಇದಲ್ಲದೇ ಕೆಲ ಸಚಿವರುಗಳ ವಿರುದ್ಧವೂ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಕೆಲ ಸಚಿವರು ನಮ್ಮ ಮಾತುಗಳನ್ನ ಕೇಳುತ್ತಿಲ್ಲ ಎಂದು ಸಿಎಂ ಬಳಿ ದೂರು ಹೇಳಿಕೊಂಡಿದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿ ದ್ದರು ನಮ್ಮ ಸಚಿವರೇ ನಮ್ಮ ಮಾತು ಕೇಳುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಸಿಎಂ ಭೇಟಿ ನಂತರ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ. ಮಾನ್ಯ ಮುಖ್ಯ ಮಂತ್ರಿಗಳನ್ನು 40 ಕ್ಕೂ ಹೆಚ್ಚು ಶಾಸಕರು ಭೇಟಿ ಮಾಡಿದ್ದೇವೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. 25ಕ್ಕೆ ಚರ್ಚೆಯನ್ನು ಮುಂದೂಡಲಾಗಿದೆ. ನಮ್ಮ ಕ್ಷೇತ್ರಗಳ ಅಭಿವೃದ್ದಿ ಕೆಲಸಗಳ ಬಗ್ಗೆ ಸಿಎಂ ಗೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ಪ್ರಾರಂಭವಾಗಲಿವೆ ಆಗ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.