ಆರೋಗ್ಯ ಇಲಾಖೆಯ ಅಧಿಕಾರಿ ಗಳಿಗೆ 50 ದಿನ ರಜೆ ಇಲ್ಲ – ಸಚಿವ ಸುಧಾಕರ್ ಖಡಕ್ ಸೂಚನೆ….

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕೊರೋನ ಎರಡನೇ ಅಲೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸರಕಾರ ಸೋಂಕು ನಿಯಂತ್ರಿಸಲು ಮತ್ತಷ್ಟು ಕ್ರಮಗಳನ್ನು ಕೈಗೊಂಡಿದೆ ಇಂದಿನಿಂದ 50 ದಿನಗಳವರೆಗೆ ಸಚಿವರು ಸೇರಿ ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಕೋವಿಡ್ ಕೆಲಸ ಮಾಡುವವರಿಗೆ ರಜೆ ನೀಡಲಾಗು ವುದಿಲ್ಲ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದ ಅವರು ರಾಜ್ಯದಲ್ಲಿ ಕೋವಿಡ್ ಎರಡನೇ ಹಂತದ ಮುನ್ಸೂಚನೆ ಇರುವ ಹಿನ್ನೆಲೆ ಆರೋಗ್ಯ ಇಲಾಖೆ, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸ ಲಾಗಿದೆ. ಸಭೆಯಲ್ಲಿ ನಿರ್ದಿಷ್ಟ ಕ್ರಮ ತೆಗೆದುಕೊಳ್ಳ ಲು ಸೂಚನೆ ನೀಡಲಾಗಿದೆ ಎಂದರು. ತಿಳಿಸಿದರು.

ಕೋವಿಡ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿರ ಹಾಸಿಗೆ ಮೀಸಲಿಡಲಾಗುವುದು, ವ್ಯಾಕ್ಸಿನ್ ಕೊಡುವ ಪ್ರಮಾಣ ಹೆಚ್ಚಿಸಲು ಕ್ರಮವನ್ನು ಕೈಗೊಳ್ಳಲಾಗುವುದು.ಇನ್ನೂ 60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಬರಬೇಕು ಎಂದರು. ಗೃಹ ವೈದ್ಯರನ್ನು ತಾತ್ಕಾಲಿಕವಾಗಿ 3 ತಿಂಗಳವರೆಗೆ ವಿಸ್ತರಣೆ ಮಾಡಲಾಗುವುದೆಂದರು.

ಪ್ರತಿ ವಾರ್ಡ್ ಗೆ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಬೆಂಗಳೂರಿಗೆ 200 ಆಂಬ್ಯುಲೆನ್ಸ್ ಮೀಸಲಿಡ ಲಾಗಿದೆ. ಹಿಂದಿನಂತೆ ಕೋವಿಡ್ ವಾರ್ ರೂಮ್ ನಡೆಸಲಾಗುವುದು. ಮತ್ತೆ ಎರಡನೇ ಅಲೆಯಲ್ಲಿ ಸೋಂಕು ಹೆಚ್ಚಾದರೆ ಬೆಡ್ ಮೀಸಲಿ ಡಲು ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.